Home / ಕವನ / ಕವಿತೆ / ಬದುಕೆಂದರೆ ಇಲ್ಲಿ…

ಬದುಕೆಂದರೆ ಇಲ್ಲಿ…

ಅನಿಧಿಕೃತ ಸಮರದಲಿ
ಜೀವ ವಿಶೇಷಗಳ ತಾಣ
ಕ್ಷಣದಲ್ಲಾಯ್ತು ಮಸಣ

ಕುಡಿಯೊಡೆದು ಚಿಗುರಿದ
ನಂದನವನವೆಲ್ಲಾ
ನಿಮಿಷದಲಿ
ಮರುಭೂಮಿಯಾಯ್ತಲ್ಲಾ!

ಗಡಿಮೀರಿ
ಒಳನುಗ್ಗಿದ್ದು ಅವರ ತಪ್ಪೊ?
ಬಿಟ್ಟಿದ್ದು ಇವರ ತಪ್ಪೊ?
ಬೇಕಿಲ್ಲ ತಪ್ಪುಸರಿಗಳ ಅಳತೆ
ರಾಜಕೀಯ ಕುತಂತ್ರದಲಿ
ತಕ್ಕಡಿ ಸರಿದೂಗೀತೇ?

ಕಪಟದೂತ್ಯವ ಆಡುವವರಾರೋ?
ದಾಳ ಒಗೆದವರಾರೋ?
ಗೆದ್ದವರಾರೋ? ಸೋತವರಾರೋ?
ಮುನ್ನುಗ್ಗಿದವರಾರೋ? ಹಿಮ್ಮೆಟ್ಟಿದವರಾರೋ?

ಏನಿಲ್ಲಾ, ಎಂತಿಲ್ಲ
ಸುಮ್ಮಸುಮ್ಮನೆ ಮಣ್ಣೊಳಗೆ
ರಕ್ತದ ನದಿಯಾದವರ
ಲೆಕ್ಕವಿಟ್ಟವರಾರು?
ಅವರಿವರ ತಪ್ಪಿಗೆ.
ತಪ್ಪಿಲ್ಲದೆಯೂ
ಬಲಿಪಶುವಾದರು ಹಲರು.

ನಮ್ಮವನದೋ, ಪರಕೀಯನದೋ
ಜೀವ ಜೀವವೇ ತಾನೇ?
ದೇಶಕ್ಕೆ ಗಡಿಯಷ್ಟೆ
ಸೃಷ್ಟಿಗೆ ಗಡಿಗಳಿವೆಯೆ?
ನಾಳೆಗೇ ಬೆಂಕಿಯೆಲ್ಲವೂ ಆರಿ
ಬೂದಿಯುಳಿದೀತು ಬರಿ.

ಆದರೆ… ಆದರೆ ಹೇಗಳಿಸುವುದು?
ಹೇಗಳಿಸುವುದು ಬಿಸಿ ನೆತ್ತರಿನ ಗುರುತುಗಳನ್ನು?
ಹೇಗೆ ಒರೆಸುವುದು ಸಂಬಂಧಿಗಳ
ಕಣ್ಣೀರಿನ ಶರಧಿಗಳನು?
ಬೇಕೆಂದರೂ ಈಗ
ತರಲಾದೀತೆ ಮತ್ತೆ ಜೀವಗಳನ್ನು?

ಬದುಕೆಂದರೆ ಇಲ್ಲಿ ಹೇ ತಂದೆ
ಮಾರಕಾಸ್ತ್ರಗಳಾಟವೇ?
ರುಂಡ ಚೆಂಡಾಡುವ ಹೂಟವೇ?
ರಾಶಿಹೆಣಗಳ ಕೂಟವೇ?
ಕಣ್ಣಾಮುಚ್ಚೆ ಮಕ್ಕಾಳಾಟವೇ?

ಬದುಕಿಸುವ ಮಂತ್ರ ಅರಿಯದ
ಹುಲುಮನುಜ
ಬದುಕು ಅಳಿಸುವ ತಂತ್ರ ಅರಿತದ್ದು
ಸರಿಯೇ ಪ್ರಭುವೇ?
ಇಲ್ಲಿ ಜೀವಕ್ಕೆ
ಬೆಲೆ ಇದೆಯೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...