Home / ಕವನ / ಕವಿತೆ / ರಂಗವಲ್ಲಿ

ರಂಗವಲ್ಲಿ

ತಿಕ್ಕಿ ತೀಡಿ ಕಸಗುಡಿಸಿ
ನೀರೆರೆಚಿ ಹದ ಮಾಡಿ ಮಣ್ಣು
ಬಿಳುಪು ನುಣ್ಣಗಿನ ರಂಗೋಲಿ ಹಿಟ್ಟು
ತೋರು-ಹೆಬ್ಬೆರಳಿನ ಮಧ್ಯೆ
ನಾಜೂಕು ಬೊಟ್ಟು!

ಚುಕ್ಕೆ ಚುಕ್ಕೆಗಳ ಎಣಿಸಿ
ಸಮಾನಾಂತರದಿ ಬಿಡಿಸಿ
ಆಚೀಚೆ ರೇಖೆ ಜಾರದಂತೆ ಒರೆಸಿ
ಒಂದಿನಿತೂ ಲೆಕ್ಕ
ತಪ್ಪುವಂತಿಲ್ಲ ಇಲ್ಲಿ.

ಚಿತ್ತ ಚಿತ್ತಾರವಾಗಿ
ಮನದೊಳಗೇ ಕುಳಿತು
ಶಿಲ್ಪ ಕುಟ್ಟುತ್ತಿದ್ದ ಮರಕುಟಿಗ
ಚಿತ್ತವನ್ನೇ ಚಿತ್ರವಾಗಿಸಿ
ಹಾದಿಬೀದಿಯವರ ಕಣ್ಣರಳಿಸಿ
ಕಣ್ಣಿರುವವರ ಮನವರಳಿಸಿ
ನಲಿಸಿ-ನಗಿಸಿದ ರಂಗವಲ್ಲಿ

ಹೊತ್ತು ಏರಿದಂತೆಲ್ಲಾ
ಕಣ್ಣಿದ್ದೂ ಇಲ್ಲದವರ ಕಾಲ್ತುಳಿತಕ್ಕೆ ಸಿಕ್ಕು
ಸತ್ತು ಸುಣ್ಣವಾಗಿ
ಕದಡಿದ ಅಸ್ಪಷ್ಟ ರೇಖೆಗಳ
ವಿಕಾರ ರೂಪವಾಗಿ
ಹೊರ ಹರಿಯದ ಬಿಕ್ಕು!

ಮಣ್ಣೊಳಗೆ ಹದ ಕಲಸಿದ
ಕಣ್ಣೀರಾಗಿ ಬೆರೆತು
ಅವರಿವರ ಅಡಿಗಳ
ಕೆಳಗೆ ಹೂತು
ಅನಾಥವಾಗಿ ಮರೆಯಾಗುತ್ತದೆ
ಸೋತು!
ಆದರೂ
ನಾಳೆಗೆ ಮತ್ತೆ ಹೊಸತು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...