ರಂಗವಲ್ಲಿ

ತಿಕ್ಕಿ ತೀಡಿ ಕಸಗುಡಿಸಿ
ನೀರೆರೆಚಿ ಹದ ಮಾಡಿ ಮಣ್ಣು
ಬಿಳುಪು ನುಣ್ಣಗಿನ ರಂಗೋಲಿ ಹಿಟ್ಟು
ತೋರು-ಹೆಬ್ಬೆರಳಿನ ಮಧ್ಯೆ
ನಾಜೂಕು ಬೊಟ್ಟು!

ಚುಕ್ಕೆ ಚುಕ್ಕೆಗಳ ಎಣಿಸಿ
ಸಮಾನಾಂತರದಿ ಬಿಡಿಸಿ
ಆಚೀಚೆ ರೇಖೆ ಜಾರದಂತೆ ಒರೆಸಿ
ಒಂದಿನಿತೂ ಲೆಕ್ಕ
ತಪ್ಪುವಂತಿಲ್ಲ ಇಲ್ಲಿ.

ಚಿತ್ತ ಚಿತ್ತಾರವಾಗಿ
ಮನದೊಳಗೇ ಕುಳಿತು
ಶಿಲ್ಪ ಕುಟ್ಟುತ್ತಿದ್ದ ಮರಕುಟಿಗ
ಚಿತ್ತವನ್ನೇ ಚಿತ್ರವಾಗಿಸಿ
ಹಾದಿಬೀದಿಯವರ ಕಣ್ಣರಳಿಸಿ
ಕಣ್ಣಿರುವವರ ಮನವರಳಿಸಿ
ನಲಿಸಿ-ನಗಿಸಿದ ರಂಗವಲ್ಲಿ

ಹೊತ್ತು ಏರಿದಂತೆಲ್ಲಾ
ಕಣ್ಣಿದ್ದೂ ಇಲ್ಲದವರ ಕಾಲ್ತುಳಿತಕ್ಕೆ ಸಿಕ್ಕು
ಸತ್ತು ಸುಣ್ಣವಾಗಿ
ಕದಡಿದ ಅಸ್ಪಷ್ಟ ರೇಖೆಗಳ
ವಿಕಾರ ರೂಪವಾಗಿ
ಹೊರ ಹರಿಯದ ಬಿಕ್ಕು!

ಮಣ್ಣೊಳಗೆ ಹದ ಕಲಸಿದ
ಕಣ್ಣೀರಾಗಿ ಬೆರೆತು
ಅವರಿವರ ಅಡಿಗಳ
ಕೆಳಗೆ ಹೂತು
ಅನಾಥವಾಗಿ ಮರೆಯಾಗುತ್ತದೆ
ಸೋತು!
ಆದರೂ
ನಾಳೆಗೆ ಮತ್ತೆ ಹೊಸತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲ + ಏಜು
Next post ನಾನು ನಾನೇ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys