ನೇತಾಜಿ

ಆರ್‍ಯಭೂಮಿಯ ಕಾಂತಿ ಮಾಸುತಿರೆ ದಿನ ದಿನಕೆ,
ಶತಮಾನ ಹಲವಾರು ಕಂಗೆಟ್ಟು ದಾಸ್ಯದಲಿ
ಕೊಳೆಯುತಿರೆ ಜನವೆಲ್ಲ ತಮ್ಮೊಂದು ಆತ್ಮಾಭಿ-
ಮಾನವನು ಘನತೆಯನು ವೀರ್ಯವನು ಶಕ್ತಿಯನು
ಕಳೆದುಳಿದು ಮೋಸದಾ ದ್ರೋಹದಾ ಉದರದಾ
ಹೇಡಿತನದಾ ಒಂದು ಕ್ಷುದ್ರಬಾಳನು ಕಳೆಯೆ,-
ಭಾರತಿಯೆ ಈ ಸ್ಥಿತಿಗೆ ನಾಚಿದಳು, ಬಾಗಿದಳು;
ಅಸಹಾಯಳಾದಳೀ ಕೋಟಿ ಮಕ್ಕಳು ಸಹಿತ!

ಸಿಡಿದುರಿದು ಹಾರಿದನು ವಂಗದೇಶದ ವೀರ
ಜನ್ಮಭೂಮಿಯ ಬದುಕ ಬವಣೆಯನು ನೋಡುತಲಿ!
ಸಾಮ್ರಾಜ್ಯವಾದಗಳ ಉಕ್ಕುಗೋಟೆಯ ಮುರಿದು
ಸರ್ವಮತಸೇನೆಯನು ‘ಜೈ ಹಿಂದ್’ ಮಂತ್ರವನು
ಆಸೇತುವಿಂದೊಗೆದ ದೇಶದಲಿ ಬಿತ್ತಿದನು.
ಅದೃಶ್ಯನಾದನಾ ಸಿಂಹ! ಸುಭಾಷ್ ಧನ್ಯನು ಹೌದು!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೬
Next post ಸೀತೆಯ ಭಾಗ್ಯ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…