Home / ಕವನ / ಕವಿತೆ / ಜೀವನ ಸಮಸ್ಯೆ

ಜೀವನ ಸಮಸ್ಯೆ

ಮನದ ಕಾಂಕ್ಷೆ ಒಲವಿನೆಣಿಕೆ ಆಳ ಅಳೆದು
ನೋಡಲಾರೆ,
ವಿಶ್ವವ್ಯಾಪಿ ಎಮ್ಮ ಮುದವು ನಿಲ್ವುದೆಲ್ಲಿ
ಎಣಿಸಲಾರೆ!
ಕತ್ತಲಂತೆ ಸುತ್ತಲೆಲ್ಲ ಮನಕೆ ಭಾರ
ದೇಹಸರ್ವ
ತಿಂಬೆದೆಲ್ಲ ಅರುಚಿ ಕೇಳು, ಯಾರ ಇದುರು
ಪೇಳ್ವುದಲ್ಲ!!
ಮಂಜುಗಟ್ಟಿ ನೇತೃದ್ವಯವು ಬೆಂದಮನವ
ಸೂಚಿಸುವುದು,
ಶ್ರಮದ ಸಾರ ಸಾಮ್ಯಗಳನು ಮೂಲೆಗಟ್ಟಿ
ತಿಳಿಯದಿಹರು!
ಕಾಣೆ ನಿಂತ ಎಣೀಸಿದಾಶೆ, ಕಾಣೆ ನಾವೆ
ವಿದಿತಕಾಂಕ್ಷೆ
ನಾವೆ ನಮಗೆ ಮೇಲೆಂದೆನಿಸಿ ಬೇಳುತಿಹೆವು
ದಾಸ್ಯ ಬಲೆಗೆ!
ಅಹೋ ನೊಂದ ಲೋಕಯೆಲ್ಲ ಎಂತೊ ಎಲ್ಲೊ
ಸಾಗುತಿಹುದು
ಆಹಾ ನಾನು ಹನಿಯ ತೆರದಿ ವಿಧಿಯ ತೆರೆಯ-
ಲುಕ್ಕುತಿಹೆನು.
ಬೆಳೆದು ಬಂದೆ ಜನವನರಿತೆ ಕೆಂಪು ಕಪ್ಪಿ
ನಷ್ಟು ಭೇದ
ಒಂದರಂತೆ ಒಂದು ಇಲ್ಲ, ವೃಕದ ಬಳಿಯ
ಕುರಿಯ ತೆರವೆ!
ಬದುಕಿನೆಣಿಕೆಯಿಂದ ಕ್ರಿಮಿಯು ಸಾಗುತಿಹುದು
ದೇಹಪೊತ್ತು
ಜ್ಞಾನಜ್ಯೋತಿ ಹೊತ್ತುತ್ತಿರುವ ನರನ ರೀತಿ
ಭೀತಿ ಎಂತು?
ಕಂಡುದೆಲ್ಲ ಕಲ್ಲಿನಷ್ಟು ಗಟ್ಟಿಯೆಂದು
ತೋರ್ಪುದಹುದು,
ಎನ್ನ ಇರದ ತೆರವು ಮಾತ್ರ ಹಿಮದ ತೆರದಿ
ಗೋಚರಿಪುದು;
ಭಾವನೆಗಳಾ ಕೂಪದಲ್ಲಿ ಹೊರಳಿ ಹೊರಳೀ
ಎದ್ದುನೋಡೆ,
ನೊಂದ ಮನ, ನಿರಾಶೆ ಜಾಲಮಯವ ನೊಂದೆ
ತೋರುತಿಹುದು.
ಹಣದ ಬರವು ತಣಿಸದೆಮ್ಮ; ಸುಖದ ಸೋಗು
ನಶಿಸದೆಮ್ಮ;
ಆದರೂ ಆನಂದಕ್ಕೊಂದು ದಿವ್ಯ ರತ್ನ
ತೃಪ್ತಿಬೇಕು!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...