ಜೀವನ ಸಮಸ್ಯೆ

ಮನದ ಕಾಂಕ್ಷೆ ಒಲವಿನೆಣಿಕೆ ಆಳ ಅಳೆದು
ನೋಡಲಾರೆ,
ವಿಶ್ವವ್ಯಾಪಿ ಎಮ್ಮ ಮುದವು ನಿಲ್ವುದೆಲ್ಲಿ
ಎಣಿಸಲಾರೆ!
ಕತ್ತಲಂತೆ ಸುತ್ತಲೆಲ್ಲ ಮನಕೆ ಭಾರ
ದೇಹಸರ್ವ
ತಿಂಬೆದೆಲ್ಲ ಅರುಚಿ ಕೇಳು, ಯಾರ ಇದುರು
ಪೇಳ್ವುದಲ್ಲ!!
ಮಂಜುಗಟ್ಟಿ ನೇತೃದ್ವಯವು ಬೆಂದಮನವ
ಸೂಚಿಸುವುದು,
ಶ್ರಮದ ಸಾರ ಸಾಮ್ಯಗಳನು ಮೂಲೆಗಟ್ಟಿ
ತಿಳಿಯದಿಹರು!
ಕಾಣೆ ನಿಂತ ಎಣೀಸಿದಾಶೆ, ಕಾಣೆ ನಾವೆ
ವಿದಿತಕಾಂಕ್ಷೆ
ನಾವೆ ನಮಗೆ ಮೇಲೆಂದೆನಿಸಿ ಬೇಳುತಿಹೆವು
ದಾಸ್ಯ ಬಲೆಗೆ!
ಅಹೋ ನೊಂದ ಲೋಕಯೆಲ್ಲ ಎಂತೊ ಎಲ್ಲೊ
ಸಾಗುತಿಹುದು
ಆಹಾ ನಾನು ಹನಿಯ ತೆರದಿ ವಿಧಿಯ ತೆರೆಯ-
ಲುಕ್ಕುತಿಹೆನು.
ಬೆಳೆದು ಬಂದೆ ಜನವನರಿತೆ ಕೆಂಪು ಕಪ್ಪಿ
ನಷ್ಟು ಭೇದ
ಒಂದರಂತೆ ಒಂದು ಇಲ್ಲ, ವೃಕದ ಬಳಿಯ
ಕುರಿಯ ತೆರವೆ!
ಬದುಕಿನೆಣಿಕೆಯಿಂದ ಕ್ರಿಮಿಯು ಸಾಗುತಿಹುದು
ದೇಹಪೊತ್ತು
ಜ್ಞಾನಜ್ಯೋತಿ ಹೊತ್ತುತ್ತಿರುವ ನರನ ರೀತಿ
ಭೀತಿ ಎಂತು?
ಕಂಡುದೆಲ್ಲ ಕಲ್ಲಿನಷ್ಟು ಗಟ್ಟಿಯೆಂದು
ತೋರ್ಪುದಹುದು,
ಎನ್ನ ಇರದ ತೆರವು ಮಾತ್ರ ಹಿಮದ ತೆರದಿ
ಗೋಚರಿಪುದು;
ಭಾವನೆಗಳಾ ಕೂಪದಲ್ಲಿ ಹೊರಳಿ ಹೊರಳೀ
ಎದ್ದುನೋಡೆ,
ನೊಂದ ಮನ, ನಿರಾಶೆ ಜಾಲಮಯವ ನೊಂದೆ
ತೋರುತಿಹುದು.
ಹಣದ ಬರವು ತಣಿಸದೆಮ್ಮ; ಸುಖದ ಸೋಗು
ನಶಿಸದೆಮ್ಮ;
ಆದರೂ ಆನಂದಕ್ಕೊಂದು ದಿವ್ಯ ರತ್ನ
ತೃಪ್ತಿಬೇಕು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೭
Next post ಅನ್ನದ್ ತಪ್ಲೆ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…