Home / ಕವನ / ಕವಿತೆ / ಜೀವನ ಸಮಸ್ಯೆ

ಜೀವನ ಸಮಸ್ಯೆ

ಮನದ ಕಾಂಕ್ಷೆ ಒಲವಿನೆಣಿಕೆ ಆಳ ಅಳೆದು
ನೋಡಲಾರೆ,
ವಿಶ್ವವ್ಯಾಪಿ ಎಮ್ಮ ಮುದವು ನಿಲ್ವುದೆಲ್ಲಿ
ಎಣಿಸಲಾರೆ!
ಕತ್ತಲಂತೆ ಸುತ್ತಲೆಲ್ಲ ಮನಕೆ ಭಾರ
ದೇಹಸರ್ವ
ತಿಂಬೆದೆಲ್ಲ ಅರುಚಿ ಕೇಳು, ಯಾರ ಇದುರು
ಪೇಳ್ವುದಲ್ಲ!!
ಮಂಜುಗಟ್ಟಿ ನೇತೃದ್ವಯವು ಬೆಂದಮನವ
ಸೂಚಿಸುವುದು,
ಶ್ರಮದ ಸಾರ ಸಾಮ್ಯಗಳನು ಮೂಲೆಗಟ್ಟಿ
ತಿಳಿಯದಿಹರು!
ಕಾಣೆ ನಿಂತ ಎಣೀಸಿದಾಶೆ, ಕಾಣೆ ನಾವೆ
ವಿದಿತಕಾಂಕ್ಷೆ
ನಾವೆ ನಮಗೆ ಮೇಲೆಂದೆನಿಸಿ ಬೇಳುತಿಹೆವು
ದಾಸ್ಯ ಬಲೆಗೆ!
ಅಹೋ ನೊಂದ ಲೋಕಯೆಲ್ಲ ಎಂತೊ ಎಲ್ಲೊ
ಸಾಗುತಿಹುದು
ಆಹಾ ನಾನು ಹನಿಯ ತೆರದಿ ವಿಧಿಯ ತೆರೆಯ-
ಲುಕ್ಕುತಿಹೆನು.
ಬೆಳೆದು ಬಂದೆ ಜನವನರಿತೆ ಕೆಂಪು ಕಪ್ಪಿ
ನಷ್ಟು ಭೇದ
ಒಂದರಂತೆ ಒಂದು ಇಲ್ಲ, ವೃಕದ ಬಳಿಯ
ಕುರಿಯ ತೆರವೆ!
ಬದುಕಿನೆಣಿಕೆಯಿಂದ ಕ್ರಿಮಿಯು ಸಾಗುತಿಹುದು
ದೇಹಪೊತ್ತು
ಜ್ಞಾನಜ್ಯೋತಿ ಹೊತ್ತುತ್ತಿರುವ ನರನ ರೀತಿ
ಭೀತಿ ಎಂತು?
ಕಂಡುದೆಲ್ಲ ಕಲ್ಲಿನಷ್ಟು ಗಟ್ಟಿಯೆಂದು
ತೋರ್ಪುದಹುದು,
ಎನ್ನ ಇರದ ತೆರವು ಮಾತ್ರ ಹಿಮದ ತೆರದಿ
ಗೋಚರಿಪುದು;
ಭಾವನೆಗಳಾ ಕೂಪದಲ್ಲಿ ಹೊರಳಿ ಹೊರಳೀ
ಎದ್ದುನೋಡೆ,
ನೊಂದ ಮನ, ನಿರಾಶೆ ಜಾಲಮಯವ ನೊಂದೆ
ತೋರುತಿಹುದು.
ಹಣದ ಬರವು ತಣಿಸದೆಮ್ಮ; ಸುಖದ ಸೋಗು
ನಶಿಸದೆಮ್ಮ;
ಆದರೂ ಆನಂದಕ್ಕೊಂದು ದಿವ್ಯ ರತ್ನ
ತೃಪ್ತಿಬೇಕು!
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...