ಬೆಳಕು ಬೇಕು

ಕಣ್ಣು ತೆರೆಸುವ ಬೆಳಕು
ನಮಗೀಗ ಬೇಕು

ಯಾರಿಗೆ ಬೇಕು ಷಂಡ
ಬೂದಿ ಮುಚ್ಚಿದ ಕೆಂಡ?
ಬೇಕೀಗ ಪ್ರಜ್ವಲಿಸುತ
ಬೆಳಗುವಾ ಜ್ವಾಲೆ

ಒಳಗೇ ಕುದ್ದರೇನು ಲಾವಾ?
ಜ್ವಾಲಾಮುಖಿ ಹೊರ ಉಕ್ಕಿ
ಸುರಿಯಬೇಕು
ಕೆಡುಕೆಲ್ಲವ ಸುಡಬೇಕು

ಉಕ್ಕುಕ್ಕಿ ಬರುವ
ಬಿಕ್ಕುಗಳ ಒಳತಳ್ಳಿ
ಆಂತರ್ಯ ಸುಟ್ಟರೇನು?
ಭೋರ್ಗರೆದು ಬರಲಿ
ಕಣ್ಣೀರ ಶರಧಿ
ಕೊಚ್ಚಿ ಹೋಗಲಿ ಕೊಳೆಯು
ಉಳಿದೀತು ಹಸನು!

ಉಸಿರು ತಾಗೀತೆಂದು
ಒಳಗೆಳೆದುಕೊಂಡು
ಬಚ್ಚಿಟ್ಟ ನಿಟ್ಟುಸಿರು
ಇನ್ನಾದರೂ ಹೊರಚಿಮ್ಮಬೇಕು
ಬಿರುಗಾಳಿಯಾಗಿ
ಹಗುರಾದುದೆಲ್ಲವೂ ತೂರಿಹೋಗಬೇಕು,
ಗಟ್ಟಿ ಉಳಿಯಬೇಕು!

ಮಣ್ಣೊಳಗೇ ಹೂತು
ನಿರ್ವೀರ್ಯವಾದೆಲ್ಲ ಕಾಳು
ತನ್ನೊಳಗಿನ ಜೊಳ್ಳೆಲ್ಲಾ ತೂರಿ
ಬಂಡೆ ಸೀಳುತ
ಮೊಳೆತು ಬರಬೇಕು
ಹಸಿರು ತರಬೇಕು!

ಮನದ ಆಳದಲ್ಲೆಲ್ಲೋ
ಅವಿತಿಟ್ಟ
ಅವ್ಯಕ್ತ ಭಾವಗಳು
ಎಲ್ಲ ಮುಸುಗುಗಳ
ಒದ್ದು
ಹೊರ ಹೊಮ್ಮಬೇಕು
ಸವಿ ಮಾತಾಗಬೇಕು!

ಬಚ್ಚಿಟ್ಟ ಬೆಳಕು
ಹೊರಹೊಮ್ಮಬೇಕು
ಕತ್ತಲಲಿ ಕಾದಿದ್ದು ಸಾಕು
ಇನ್ನು ಬೆಳಗಾಗಬೇಕು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರತ್ಯಕ್ಷ
Next post ಸೀರೆಯೊಳಗಡೆ ಕಷ್ಟವಿದೆ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…