Home / ಕವನ / ಕವಿತೆ / ಶ್ರೀರಾಮನ ಜನನ

ಶ್ರೀರಾಮನ ಜನನ

ಅಯೋಧ್ಯೆ ರಾಜ್ಯದಲಿ ಇನಕುಲದ ಖ್ಯಾತಿಯಲಿ
ಧರ್ಮಾಭಿಮಾನದಲಿ ಬಾಳಿದನು ನೋಡಾ.
ದಶರಥನೆಂದಾತನೀ ನೃಪ ಶ್ರೇಷ್ಠನೆಂಬಂತೆ
ಪಾಲಿಸುತ ದೇಶವನು ಆಳಿದನು ಕೇಳಾ.

ರಾಜಾಧಿರಾಜನೂ ಭುವನೈಕ ವಂದ್ಯನೂ
ಸಿರಿಲೋಲ ಮಾನ್ಯನೂ ರವಿಕುಲದ ಪ್ರಭುವು;
ಎಂದೆನಿಸಿ ತ್ರಿಪತ್ನಿಯಿಂದೆಸೆದ ರಾಜನಿಗೆ
ಪುತ್ರಸುಖ ಸಲಿಸದಿಹ ಕೊರತೆಯಿದು ನಿಜವು!

ಪ್ರಾರ್ಥಿಸುತ ಧೀರಸುತ ಮೊರೆಯಿಡುತಲತಿಶಯದಿ
ಪೊಂದಿದನೆ?  ತೊಡಗಿದನು ಪುತ್ರಕಾಮೇಷ್ಠಿ;
ಆಚರಣೆಗೆಂದೆಂದು ಋಷಿವರರ ಕರೆಯಿಸುತ
ದಶರಥನು ಸುರಿಸಿದನು ಬೇಡಿಕೆಯ ವೃಷ್ಠಿ!

ಆನಂದ ಸಂಸಾರ, ಸತ್ಪುತ್ರ ಶುಭಹಾರ-
ದಿಂದೆಸೆವ ಭಾಗ್ಯವದು ಇಲ್ಲದಿರೆ ಏಕೆ,
ರಾಜ್ಯಸಿರಿ ಜನಗಣವು ಲೋಕಾಧಿಕಾರಗಳು?
ಈ ಜಗಕೆ ವ್ಯರ್ಥವದು ಸಂದೇಹವೇಕೆ!

ಪುತ್ರಕಾಮೇಷ್ಠಿಯಿಂ ಪ್ರಸನ್ನನಾದನದೊ
ಸಂತುಷ್ಟನಾದ ಆ ದೇವತೆಯು ಅಗ್ನಿ-
ನಗುಮುಖದೆ ಒಲಿದೊಲಿದು ಹೋಮಾಗ್ನಿಯಿಂ ಹಾಡು
ಹರಿಸಿದನು ರಾಜನನು ತಲೆಯನ್ನು ಮುಟ್ಟಿ!

ಕೊಟ್ಟನದೊ ಪಾಯಸವ ಪ್ರಸಾದ ರೂಪದಲಿ
ಕೊಟ್ಟು ಮರೆಯಾದನಾ ಮಿಂಚಿನಂತಲ್ಲಿಂ;
ಇತ್ತ ನೃಪ ಸತಿಯರಿಗೆ ತ್ರಿಭಾಗವನ್ನೆಸಗಿ
ಮೂವರೊಳು ಹಂಚಿದನು ಬಹುಪ್ರೇಮ ಮುದದಿಂ.

ಹಿರಿರಾಣಿ ಕೌಸಲ್ಯೆ ಹಿರಿದಾಗಿ ಗರ್ಭವನು
ತಳೆದಳಾ ದಿನದಿನಕೆ ಹಿಗ್ಗಿಗ್ಗಿ-ಅಂತೆ!
ಹರಿವಂಶೋದ್ದಾರಕನ ಹಡೆಯುವಾ ಲಕ್ಷಣವ
ಮುದವಾಂತು ಪೊಂದಿದಳು ಶ್ರೀದೇವಿಯಂತೆ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...