Home / ಕವನ / ಕವಿತೆ / ಶ್ರೀರಾಮನ ಜನನ

ಶ್ರೀರಾಮನ ಜನನ

ಅಯೋಧ್ಯೆ ರಾಜ್ಯದಲಿ ಇನಕುಲದ ಖ್ಯಾತಿಯಲಿ
ಧರ್ಮಾಭಿಮಾನದಲಿ ಬಾಳಿದನು ನೋಡಾ.
ದಶರಥನೆಂದಾತನೀ ನೃಪ ಶ್ರೇಷ್ಠನೆಂಬಂತೆ
ಪಾಲಿಸುತ ದೇಶವನು ಆಳಿದನು ಕೇಳಾ.

ರಾಜಾಧಿರಾಜನೂ ಭುವನೈಕ ವಂದ್ಯನೂ
ಸಿರಿಲೋಲ ಮಾನ್ಯನೂ ರವಿಕುಲದ ಪ್ರಭುವು;
ಎಂದೆನಿಸಿ ತ್ರಿಪತ್ನಿಯಿಂದೆಸೆದ ರಾಜನಿಗೆ
ಪುತ್ರಸುಖ ಸಲಿಸದಿಹ ಕೊರತೆಯಿದು ನಿಜವು!

ಪ್ರಾರ್ಥಿಸುತ ಧೀರಸುತ ಮೊರೆಯಿಡುತಲತಿಶಯದಿ
ಪೊಂದಿದನೆ?  ತೊಡಗಿದನು ಪುತ್ರಕಾಮೇಷ್ಠಿ;
ಆಚರಣೆಗೆಂದೆಂದು ಋಷಿವರರ ಕರೆಯಿಸುತ
ದಶರಥನು ಸುರಿಸಿದನು ಬೇಡಿಕೆಯ ವೃಷ್ಠಿ!

ಆನಂದ ಸಂಸಾರ, ಸತ್ಪುತ್ರ ಶುಭಹಾರ-
ದಿಂದೆಸೆವ ಭಾಗ್ಯವದು ಇಲ್ಲದಿರೆ ಏಕೆ,
ರಾಜ್ಯಸಿರಿ ಜನಗಣವು ಲೋಕಾಧಿಕಾರಗಳು?
ಈ ಜಗಕೆ ವ್ಯರ್ಥವದು ಸಂದೇಹವೇಕೆ!

ಪುತ್ರಕಾಮೇಷ್ಠಿಯಿಂ ಪ್ರಸನ್ನನಾದನದೊ
ಸಂತುಷ್ಟನಾದ ಆ ದೇವತೆಯು ಅಗ್ನಿ-
ನಗುಮುಖದೆ ಒಲಿದೊಲಿದು ಹೋಮಾಗ್ನಿಯಿಂ ಹಾಡು
ಹರಿಸಿದನು ರಾಜನನು ತಲೆಯನ್ನು ಮುಟ್ಟಿ!

ಕೊಟ್ಟನದೊ ಪಾಯಸವ ಪ್ರಸಾದ ರೂಪದಲಿ
ಕೊಟ್ಟು ಮರೆಯಾದನಾ ಮಿಂಚಿನಂತಲ್ಲಿಂ;
ಇತ್ತ ನೃಪ ಸತಿಯರಿಗೆ ತ್ರಿಭಾಗವನ್ನೆಸಗಿ
ಮೂವರೊಳು ಹಂಚಿದನು ಬಹುಪ್ರೇಮ ಮುದದಿಂ.

ಹಿರಿರಾಣಿ ಕೌಸಲ್ಯೆ ಹಿರಿದಾಗಿ ಗರ್ಭವನು
ತಳೆದಳಾ ದಿನದಿನಕೆ ಹಿಗ್ಗಿಗ್ಗಿ-ಅಂತೆ!
ಹರಿವಂಶೋದ್ದಾರಕನ ಹಡೆಯುವಾ ಲಕ್ಷಣವ
ಮುದವಾಂತು ಪೊಂದಿದಳು ಶ್ರೀದೇವಿಯಂತೆ!
*****

Tagged:

Leave a Reply

Your email address will not be published. Required fields are marked *

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...