Home / ಕವನ / ಕವಿತೆ / ಶ್ರೀರಾಮನ ಜನನ

ಶ್ರೀರಾಮನ ಜನನ

ಅಯೋಧ್ಯೆ ರಾಜ್ಯದಲಿ ಇನಕುಲದ ಖ್ಯಾತಿಯಲಿ
ಧರ್ಮಾಭಿಮಾನದಲಿ ಬಾಳಿದನು ನೋಡಾ.
ದಶರಥನೆಂದಾತನೀ ನೃಪ ಶ್ರೇಷ್ಠನೆಂಬಂತೆ
ಪಾಲಿಸುತ ದೇಶವನು ಆಳಿದನು ಕೇಳಾ.

ರಾಜಾಧಿರಾಜನೂ ಭುವನೈಕ ವಂದ್ಯನೂ
ಸಿರಿಲೋಲ ಮಾನ್ಯನೂ ರವಿಕುಲದ ಪ್ರಭುವು;
ಎಂದೆನಿಸಿ ತ್ರಿಪತ್ನಿಯಿಂದೆಸೆದ ರಾಜನಿಗೆ
ಪುತ್ರಸುಖ ಸಲಿಸದಿಹ ಕೊರತೆಯಿದು ನಿಜವು!

ಪ್ರಾರ್ಥಿಸುತ ಧೀರಸುತ ಮೊರೆಯಿಡುತಲತಿಶಯದಿ
ಪೊಂದಿದನೆ?  ತೊಡಗಿದನು ಪುತ್ರಕಾಮೇಷ್ಠಿ;
ಆಚರಣೆಗೆಂದೆಂದು ಋಷಿವರರ ಕರೆಯಿಸುತ
ದಶರಥನು ಸುರಿಸಿದನು ಬೇಡಿಕೆಯ ವೃಷ್ಠಿ!

ಆನಂದ ಸಂಸಾರ, ಸತ್ಪುತ್ರ ಶುಭಹಾರ-
ದಿಂದೆಸೆವ ಭಾಗ್ಯವದು ಇಲ್ಲದಿರೆ ಏಕೆ,
ರಾಜ್ಯಸಿರಿ ಜನಗಣವು ಲೋಕಾಧಿಕಾರಗಳು?
ಈ ಜಗಕೆ ವ್ಯರ್ಥವದು ಸಂದೇಹವೇಕೆ!

ಪುತ್ರಕಾಮೇಷ್ಠಿಯಿಂ ಪ್ರಸನ್ನನಾದನದೊ
ಸಂತುಷ್ಟನಾದ ಆ ದೇವತೆಯು ಅಗ್ನಿ-
ನಗುಮುಖದೆ ಒಲಿದೊಲಿದು ಹೋಮಾಗ್ನಿಯಿಂ ಹಾಡು
ಹರಿಸಿದನು ರಾಜನನು ತಲೆಯನ್ನು ಮುಟ್ಟಿ!

ಕೊಟ್ಟನದೊ ಪಾಯಸವ ಪ್ರಸಾದ ರೂಪದಲಿ
ಕೊಟ್ಟು ಮರೆಯಾದನಾ ಮಿಂಚಿನಂತಲ್ಲಿಂ;
ಇತ್ತ ನೃಪ ಸತಿಯರಿಗೆ ತ್ರಿಭಾಗವನ್ನೆಸಗಿ
ಮೂವರೊಳು ಹಂಚಿದನು ಬಹುಪ್ರೇಮ ಮುದದಿಂ.

ಹಿರಿರಾಣಿ ಕೌಸಲ್ಯೆ ಹಿರಿದಾಗಿ ಗರ್ಭವನು
ತಳೆದಳಾ ದಿನದಿನಕೆ ಹಿಗ್ಗಿಗ್ಗಿ-ಅಂತೆ!
ಹರಿವಂಶೋದ್ದಾರಕನ ಹಡೆಯುವಾ ಲಕ್ಷಣವ
ಮುದವಾಂತು ಪೊಂದಿದಳು ಶ್ರೀದೇವಿಯಂತೆ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...