ಕುಣಿತದ ಧ್ವನಿತ

ತಟಪಟ ತಟ್ಟುತ ಒಟ್ಟಿನಲಿ
ಕೋಲಿಂ ಕೆಲವರು ಹೊಲದಲ್ಲಿ,
ಕಿಣಿಕಿಣಿ ಮಣಿಯಿಂ ಕುಣಿಸುತಲಿ,
ಗಲಗಲ ಬಾಲರ ಒಲಿಸುತಲಿ.

ಡಂ ಢಂ ಡಾಂಬರ ಗಡಗಡಿಸಿ
ಪೆಂಪಾಪೆಂಪೆಂದು ಪೇಳಿರಿಸಿ,
ಲಲ್ಲಾಲ್ಲೆನ್ನುತ ಸೊಲ್ಲನೊಂದು
ಬಾಯೊಳು ಸಾಯಲು ಹಾತೊರೆದು!

ರತ್ನದ ಚಿನ್ನದ ಬಣ್ಣಗಳು,
ಹೊಳಪಿನ ಸುಲಲಿತ ಈ ಕಲೆಯು,
ಸೋಜಿಗದುಜ್ಜಿದ ಗೆಜ್ಜೆಯನು
ಕಾಲಲಿ ಸಾಲಲಿ ಠಣಠಣಿಸಿ!

ಆಚಿಂದೀಚೆಗೆ ಹಾಯುತಲಿ;
ಆನಂದದಾಡುತ ಹಾರುತಲಿ;
ಬಗ್ಗುತ ಏಳುತ ತಿರುಹುತಲು,
ಸಾಲಿಂ ಕೋಲ್ಗಳ ಕಟಕಟಿಸಿ.

ಸುಗ್ಗಿಯಲಗ್ಗದ ಸಗ್ಗವಿದು
ಒಗ್ಗುವ ಒಮ್ಮನದೊಲುಮೆಯಿದು;
ತಾಳದ ಗಣಗಣ ಪ್ರತಿಧ್ವನಿಯು,
ಮಾನಸಿಕಾಂಕ್ಷೆಯ ಸಿರಿಯೊಲವು.

ಕುಣುಕುಣು ಕುಲುಕುತ ಅಂಗಗಳೂ
ಥಕಥಕ ತಟ್ಟುತ ಪಾರುತಲಿ,
ಕೂಟದೊಳಾಟದ ಪಠನವಿದು
ಉತ್ಸವದಾಡಲು ಸಿರಿಸುರಿಯುಂ!

ಬಯಲಿನ ನಡುವಣ ಕುಣಿಬನವೂ,
ಬೆವರಿನ ದಣಿಮಣಿ ಚಿನ್ಮಣಿಯುಂ,
ನೋಡಲದಚ್ಚರಿ! ನಿಟ್ಟುಸುತ
ಆಡುವ ಬಗೆ-ಗೆಲು ಹುಟ್ಟಿಸುತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೯
Next post ‘ಶ್ರೀ’ ಅವರಿಗೆ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…