ಸ್ವಾಗತ

ಕಿಟಕಿ ಬಾಗಿಲುಗಳ ತೆರೆದಿಟ್ಟಿರುವೆ
ಮೂಲೆ ಮೂಲೆಯಲ್ಲಿನ ಧೂಳು ಜಾಡಿಸಿ
ಅಲ್ಲಲ್ಲಿ ಹೆಣೆದಿಟ್ಟಿದ್ದ ಬಲೆಗಳನ್ನೆಲ್ಲ
ಜೇಡನ ಸಮೇತ ಕಿತ್ತೆಸೆದಿರುವೆ
ಬರುವುದಾದರೆ ಇಂದೆ ಬಂದುಬಿಡು
ತೋರಣವಿಲ್ಲ ಬಾಗಿಲಿಗೆ
ಹೊಸಿಲಲ್ಲಿಲ್ಲ ರಂಗೋಲಿ
ಎಂದೆಲ್ಲ ಸಬೂಬುಬೇಡ
ನೀ ಬಂದೇ ಬರುವೆಯಾದರೆ
ಆಸೆಗಳ ಧೂಪದಾರತಿ ಎತ್ತಿ
ಕನಸುಗಳನ್ನೆಲ್ಲ ಹೆಣೆದು
ಮಾಲೆ ಮಾಡಿ ಕಾಯುವೆ
ಇಂದೋ, ನಾಳೆಯೋ ಅನುಮಾನಿಸದೆ
ಬಂದೇ ಬಿಡು ಈ ಗಳಿಗೆಯೇ
ನೀ ಬಂದಾಕ್ಷಣವೇ
ಹೊಸದಿನ, ಹೊಸತನ
ಹೊಸಮನ, ಹೊಸತು
ಎಲ್ಲವೂ ಹೊಚ್ಚಹೊಸತು
ವಿದಾಯ ನೆನ್ನೆಗೆ, ನೋವಿಗೆ, ಹತಾಶೆಗೆ
ಪ್ರತೀಕ್ಷೆಯಲ್ಲಿಯೇ ಕಳೆದಾಯಿತು
ಯುಗ ಯುಗವೆಲ್ಲ
ಇನ್ನಾದರೂ ಬಂದು ಬಿಡು
ಕಾಯಿಸದೇ, ವಿಳಂಬಿಸದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಶರೀರ ಜೀವ
Next post ಕೆಸರು

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys