Home / ಕವನ / ಕವಿತೆ / ಕವಿಯ ಮನಸ್ಸು

ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...