Home / ಕವನ / ಕವಿತೆ / ಕವಿಯ ಮನಸ್ಸು

ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...