Home / ಕವನ / ಕವಿತೆ / ಕವಿಯ ಮನಸ್ಸು

ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...