ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೦
Next post ನಿನ್ನ ಹೆಸರು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

cheap jordans|wholesale air max|wholesale jordans|wholesale jewelry|wholesale jerseys