Home / ಕವನ / ಕವಿತೆ / ಒಗಟ ಬಿಡಿಸಿರೇ

ಒಗಟ ಬಿಡಿಸಿರೇ

ಹಾದಿಬೀದಿಯಲ್ಲಿ ಹೊನ್ನ ಮಾರುತ್ತಿದ್ದರಂತೆ
ಅಂದು, ಅಂತೆಯೇ ಮಾರಿದನೊಬ್ಬ
ತನ್ನ ಸತಿಯ ನಡುಬೀದಿಯಲಿ
ಕ್ರಯಕ್ಕಿಟ್ಟ ಹೆಣ್ಣು ಹರಾಜಾದಳು
ಬಿಕರಿಗಿಟ್ಟ ವಸ್ತುವಿನಂತೆ
ಕೊಟ್ಟಮಾತ ಉಳಿಸಿಕೊಳ್ಳಲು
ಸತ್ಯದ ಕೀರ್ತಿಗಾಗಿ
ಸತಿಯ ಮಾರಿ, ತನ್ನ ತಾ
ಮಾರಿಕೊಂಡ ಹುಂಬ ಗಂಡ
ಇವನಿಗಿಂತ ಕಡೆಯಾದನೊಬ್ಬ
ಪಣಕ್ಕಿಟ್ಟ ತನ್ನ ಸತಿಯ
ಲತ್ತೆಯಾಟದಲಿ ಸೋತು
ಪರರಿಗೊಪ್ಪಿಸಿದ ಧನದಂತೆ
ಗೆದ್ದವರು ಪೌರುಷದಲಿ
ಗೆದ್ದೆವೆಂಬ ಹಮ್ಮಿನಲಿ
ಕಣ್ಣೆದುರೇ ಸತಿಯ ಎಳೆದಾಡಿ
ಸೊಂಟಕ್ಕೆ ಕೈ ಇಕ್ಕಿದರೂ
ಬಗ್ಗಿಸಿದ ತಲೆ ಎತ್ತಲಾರದೆ
ಷಂಡರಾದರು ಗಂಡಂದಿರೈವರು
ನಡುದಾರಿಯಲಿ ಕೈಕೊಟ್ಟು
ಸತಿ ಉಟ್ಟ ಅರ್ಧ ಸೀರೆ ಹರಿದುಟ್ಟು
ನಿರ್ಧಯನಾಗಿ ಹೊರಟೆ ಬಿಟ್ಟ
ಕಗ್ಗಾಡಿನಲಿ ನಿದ್ರೆ ಹೋದ
ಅರ್ಧಾಂಗಿನಿಯ ಬಿಟ್ಟು!
ಅಲ್ಪನ ಮಾತಿಗೆ
ಕಲ್ಪನೆಯ ತಾವಿಗೆ
ಫಲಹೊತ್ತ ಮಡದಿಯ
ಕಾಡಟ್ಟಿ ಜನಮೆಚ್ಚಿದ
ದೊರೆಯಾದ ಅಗ್ನಿಗೆ
ತಳ್ಳಿದ್ದ ದೊರೆಯೊಬ್ಬ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...