ಬೊಬ್ಬಿಡುವ ಶರದಿ ನಾನಲ್ಲ
ಸದ್ದಿಲ್ಲದೆ ಹರಿವ ನದಿಯೂ ಅಲ್ಲಾ
ಬಳ್ಳಿ ಕುಸುಮ ಕೋಮಲೆ ನಾನಲ್ಲ
ನಾನು ನಾನೇ ಗೆಳೆಯ
ನಾನು ನಾನೇ, ನಾನು ನಾನೇ
ಮನದಾಳದ ಭಾವಗಳೆಲ್ಲ
ಉರಿವ ಕೆಂಡವಲ್ಲ
ಬೆಳದಿಂಗಳ ತಂಪೂ ಅಲ್ಲಾ
ಕೆಂಪು ಕೆಂಡ ತಂಪಿನ
ಮಧ್ಯೆದೊಳಗಿನ ಭಾವ ನಾನು
ನೊಸಲಿನ ಸಿಂಧೂರದಂತೆ
ಸಿಂಗಾರವಲ್ಲ ನಾ ಗೆಳೆಯ
ಬದುಕ ಹಾದಿಯಲಿ
ಹೆಜ್ಜೆ ಜೋಡಿಸುವ ಸಹಚಾರಿ
ಬಾಳಬಂಡಿಯ ಮತ್ತೊಂದುಗಾಲಿನಾ
ಗುಡಿಯ ಕಳಸದ ಹೊನ್ನ ಶಿಕರವಲ್ಲ
ಗರ್ಭಗುಡಿಯ ಸಿರಿದೇವಿಯೂ ಅಲ್ಲಾ
ಅನುಕ್ಷಣವೂ ನಿನ್ನೊಳಗೆ ನಾನಂತೆ
ನನ್ನೊಡನೇ ನೀನು
ನಾನು ನಾನಾಗಿರುವೆ ಗೆಳೆಯ
ನೀನು ನೀನಾಗಿರು
*****
Related Post
ಸಣ್ಣ ಕತೆ
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…