Home / ಕವನ / ಕವಿತೆ / ವಿರಹಿಣಿಯ ಸಂತಾಪ

ವಿರಹಿಣಿಯ ಸಂತಾಪ

ಚಂದ್ರಮುಖಿಯು ನೀನು ಎಂದು ಬೆಡಗುಗಾರ್ತಿ ಚೆಲುವೆಯೆಂದು
ಸಂದ ಜೀವದಾತ್ಮ ಗೊಂಬೆಯೆಂದು ಪೇಽಳಿ-
ಇಂದು ತರವೆ ಇನಿಯ ಇನಿತು ಕೊರಗಿಸುವುದೊ!

ನೀರೆ ನೀನೆ ಶೂರೆ ಎಂದು ಎನ್ನ ಮೋಹ ಕಲಶವೆಂದು
ಸಾರೆ ಸರಸಿ ತೀರದಲ್ಲಿ ಚೆನ್ನು ಮುತ್ತು-
ಮೀರಿದೊಂದಾನಂದದಿತ್ತು-ಎಲ್ಲಿ ಪೋಽದೆ?

ಊರದೇವರಬ್ಬದಲ್ಲಿ ಬೆಳ್ದಿಂಗಳಾ ಆಟದಲ್ಲಿ
ಸೇರಿದವರು ಈ ದಂಪತಿಗಳಾರು-ಎಂದು,
ಸಾರಿನೋಡೆ ನಾಚಿ ನಡೆದುದನ್ನು ನೆನೆಯೆಯಾ?

ಅಂದು ಪತ್ರದಲ್ಲಿ ನೀನು ಬಣ್ಣನೆಗಳ ಶಬ್ದ ಜಾಲ-
ದಿಂದ ಕರೆದು ಬರುವ ಸುಖದ ಕನಸ ಕಂಡು
ನೊಂದ ನನ್ನ ವಂಚಿಸುವುದು-ನಿನಗೆ ತರಽವೆ?

ಬಡವರೊಲಿದ ನಲ್ಮೆ ಜೀವ ನೈಜ ಸುಖದ ರೂಪು ಅಲ್ಲ-?
ಬಡಿದು ಬಾಳ ಭಾಗ್ಯವನ್ನು ದ್ರೋಹದಿಂದ-
ಪಡೆವ ಅಲ್ಪ ಹುಸಿಯ ಸುಖದ ಕೆಚ್ಚು ಏಽಕೆ?

ಮೂಡುವೆಟ್ಟ ಹತ್ತುವಾಗ ಸೋಗೆ ಕೇಕೆ ಹಾಕುವಾಗ
ಕಾಡಸೊಬಗು ನೋಡಿ ದಣಿದು ಸೇರಿದಾಗ
ಕೂಡಿ ಬಿಡಿಸಿ ಲೋಕ ಸುಖವ ಪೇಳಿದೆಽಲ್ಲಿ?

ಮೊಸರು ಕಡೆದು ಬೆಣ್ಣೆ ತೂಗೆ, ಕಂದ ಜೋ ಜೊ ಲಾಲಿ ಹಾಡೆ
ಹಸಲೆ ಹುಲ್ಲ ಕುಯ್ಯುವಾಗ್ಗೆ ಹಾಡಿದೇನೊ?-
ಹೊಸತು ಜೋಡಿ ಜೀವ ಸುಖದ ಮರೆತೆಯೇನೊ?

ಕೊಲ್ಲಿಗದ್ದೆ ಅರುವಿಗಾಗಿ, ಹೊನಲು ಹರಿವ ಬಯಲಿಗಾಗಿ
ಬಳ್ಳಿ ಮನೆಯ ಕಟ್ಟಿ ನಲಿವ-ಕಾಡು ಸುಽತ್ತಿ
ಮಲ್ಲಳಿಗಳ ಹಾಡ ಕೇಳೆ ನಡೆವ ಬಾಽರೊ!

ಸೂಜಿದಾರ ಹೊತ್ತು ಹೊತ್ತು ಹೊರುವ ಭಾರ ಅದೇ ಆಯ್ತು!
ಜಾಜಿ ಕೋದು ಯಾರ ಕೊರಳಲಿರಿಸಲೆಂದು
ಸೋಜಿಗದಲಿ ನೆನೆದು ನೆನೆದು-ಸೊರಗಿದೆ ನಾ!

ಬಾವಿ ನೀರ ಸೇದುವಾಗ ಎಸರ ಬೇಯ್ಸಿ ತೆಗೆಯುವಾಗ
ಕವಿದ ಮಂಕ ಕಣ್ಣಿನಿಂದ ಒರಸುವಾಗಽ
ಜೀವಿಗಳ ಈ ಹುಸಿಯ ಬಾಳ ನೆನೆವೆ ನಾಽನೊ!

ನಗುತಲಿರು ನೀ, ನಗುವಿನಲ್ಲಿ ಬಾಳ ಸತ್ಯ ಮೂಡಿ ಬರಲಿ-
ಒಗುವ ಸತ್ಯ ನಲುಮೆಯೆಲ್ಲ-ಒಲುಮೆಯಲ್ಲಿ,
ಸೊಗವನೀಕ್ಷಿಸುತಲೆ ಬರಲಿ-ಆಹಾ ಕಾಽಯೋ!

ಸೂರ್ಯ ಕಾಂತಿ ಬೀಳ್ವ ಮುನ್ನ, ಚಂದ್ರ ಬೆಳಕು ತೋರ್ವ ಮುನ್ನ,
ಕಾರ್ಯಲೋಕ ಶಾಂತಿ ತಲ್ಪ ಸೇರ್ವ ಮುಽನ್ನ,
ಭಾರ್ಯೆ ದುಃಖವಳಿಸೆ, ಪ್ರಿಯಾ-ಬಂದು ಸೇಽರೊ!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...