ವಿರಹಿಣಿಯ ಸಂತಾಪ

ಚಂದ್ರಮುಖಿಯು ನೀನು ಎಂದು ಬೆಡಗುಗಾರ್ತಿ ಚೆಲುವೆಯೆಂದು
ಸಂದ ಜೀವದಾತ್ಮ ಗೊಂಬೆಯೆಂದು ಪೇಽಳಿ-
ಇಂದು ತರವೆ ಇನಿಯ ಇನಿತು ಕೊರಗಿಸುವುದೊ!

ನೀರೆ ನೀನೆ ಶೂರೆ ಎಂದು ಎನ್ನ ಮೋಹ ಕಲಶವೆಂದು
ಸಾರೆ ಸರಸಿ ತೀರದಲ್ಲಿ ಚೆನ್ನು ಮುತ್ತು-
ಮೀರಿದೊಂದಾನಂದದಿತ್ತು-ಎಲ್ಲಿ ಪೋಽದೆ?

ಊರದೇವರಬ್ಬದಲ್ಲಿ ಬೆಳ್ದಿಂಗಳಾ ಆಟದಲ್ಲಿ
ಸೇರಿದವರು ಈ ದಂಪತಿಗಳಾರು-ಎಂದು,
ಸಾರಿನೋಡೆ ನಾಚಿ ನಡೆದುದನ್ನು ನೆನೆಯೆಯಾ?

ಅಂದು ಪತ್ರದಲ್ಲಿ ನೀನು ಬಣ್ಣನೆಗಳ ಶಬ್ದ ಜಾಲ-
ದಿಂದ ಕರೆದು ಬರುವ ಸುಖದ ಕನಸ ಕಂಡು
ನೊಂದ ನನ್ನ ವಂಚಿಸುವುದು-ನಿನಗೆ ತರಽವೆ?

ಬಡವರೊಲಿದ ನಲ್ಮೆ ಜೀವ ನೈಜ ಸುಖದ ರೂಪು ಅಲ್ಲ-?
ಬಡಿದು ಬಾಳ ಭಾಗ್ಯವನ್ನು ದ್ರೋಹದಿಂದ-
ಪಡೆವ ಅಲ್ಪ ಹುಸಿಯ ಸುಖದ ಕೆಚ್ಚು ಏಽಕೆ?

ಮೂಡುವೆಟ್ಟ ಹತ್ತುವಾಗ ಸೋಗೆ ಕೇಕೆ ಹಾಕುವಾಗ
ಕಾಡಸೊಬಗು ನೋಡಿ ದಣಿದು ಸೇರಿದಾಗ
ಕೂಡಿ ಬಿಡಿಸಿ ಲೋಕ ಸುಖವ ಪೇಳಿದೆಽಲ್ಲಿ?

ಮೊಸರು ಕಡೆದು ಬೆಣ್ಣೆ ತೂಗೆ, ಕಂದ ಜೋ ಜೊ ಲಾಲಿ ಹಾಡೆ
ಹಸಲೆ ಹುಲ್ಲ ಕುಯ್ಯುವಾಗ್ಗೆ ಹಾಡಿದೇನೊ?-
ಹೊಸತು ಜೋಡಿ ಜೀವ ಸುಖದ ಮರೆತೆಯೇನೊ?

ಕೊಲ್ಲಿಗದ್ದೆ ಅರುವಿಗಾಗಿ, ಹೊನಲು ಹರಿವ ಬಯಲಿಗಾಗಿ
ಬಳ್ಳಿ ಮನೆಯ ಕಟ್ಟಿ ನಲಿವ-ಕಾಡು ಸುಽತ್ತಿ
ಮಲ್ಲಳಿಗಳ ಹಾಡ ಕೇಳೆ ನಡೆವ ಬಾಽರೊ!

ಸೂಜಿದಾರ ಹೊತ್ತು ಹೊತ್ತು ಹೊರುವ ಭಾರ ಅದೇ ಆಯ್ತು!
ಜಾಜಿ ಕೋದು ಯಾರ ಕೊರಳಲಿರಿಸಲೆಂದು
ಸೋಜಿಗದಲಿ ನೆನೆದು ನೆನೆದು-ಸೊರಗಿದೆ ನಾ!

ಬಾವಿ ನೀರ ಸೇದುವಾಗ ಎಸರ ಬೇಯ್ಸಿ ತೆಗೆಯುವಾಗ
ಕವಿದ ಮಂಕ ಕಣ್ಣಿನಿಂದ ಒರಸುವಾಗಽ
ಜೀವಿಗಳ ಈ ಹುಸಿಯ ಬಾಳ ನೆನೆವೆ ನಾಽನೊ!

ನಗುತಲಿರು ನೀ, ನಗುವಿನಲ್ಲಿ ಬಾಳ ಸತ್ಯ ಮೂಡಿ ಬರಲಿ-
ಒಗುವ ಸತ್ಯ ನಲುಮೆಯೆಲ್ಲ-ಒಲುಮೆಯಲ್ಲಿ,
ಸೊಗವನೀಕ್ಷಿಸುತಲೆ ಬರಲಿ-ಆಹಾ ಕಾಽಯೋ!

ಸೂರ್ಯ ಕಾಂತಿ ಬೀಳ್ವ ಮುನ್ನ, ಚಂದ್ರ ಬೆಳಕು ತೋರ್ವ ಮುನ್ನ,
ಕಾರ್ಯಲೋಕ ಶಾಂತಿ ತಲ್ಪ ಸೇರ್ವ ಮುಽನ್ನ,
ಭಾರ್ಯೆ ದುಃಖವಳಿಸೆ, ಪ್ರಿಯಾ-ಬಂದು ಸೇಽರೊ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೧
Next post ಈ ಶಿಕ್ಷೆ ಯಾರಿಗೆಂದು?

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

cheap jordans|wholesale air max|wholesale jordans|wholesale jewelry|wholesale jerseys