ವಿರಹಿಣಿಯ ಸಂತಾಪ

ಚಂದ್ರಮುಖಿಯು ನೀನು ಎಂದು ಬೆಡಗುಗಾರ್ತಿ ಚೆಲುವೆಯೆಂದು
ಸಂದ ಜೀವದಾತ್ಮ ಗೊಂಬೆಯೆಂದು ಪೇಽಳಿ-
ಇಂದು ತರವೆ ಇನಿಯ ಇನಿತು ಕೊರಗಿಸುವುದೊ!

ನೀರೆ ನೀನೆ ಶೂರೆ ಎಂದು ಎನ್ನ ಮೋಹ ಕಲಶವೆಂದು
ಸಾರೆ ಸರಸಿ ತೀರದಲ್ಲಿ ಚೆನ್ನು ಮುತ್ತು-
ಮೀರಿದೊಂದಾನಂದದಿತ್ತು-ಎಲ್ಲಿ ಪೋಽದೆ?

ಊರದೇವರಬ್ಬದಲ್ಲಿ ಬೆಳ್ದಿಂಗಳಾ ಆಟದಲ್ಲಿ
ಸೇರಿದವರು ಈ ದಂಪತಿಗಳಾರು-ಎಂದು,
ಸಾರಿನೋಡೆ ನಾಚಿ ನಡೆದುದನ್ನು ನೆನೆಯೆಯಾ?

ಅಂದು ಪತ್ರದಲ್ಲಿ ನೀನು ಬಣ್ಣನೆಗಳ ಶಬ್ದ ಜಾಲ-
ದಿಂದ ಕರೆದು ಬರುವ ಸುಖದ ಕನಸ ಕಂಡು
ನೊಂದ ನನ್ನ ವಂಚಿಸುವುದು-ನಿನಗೆ ತರಽವೆ?

ಬಡವರೊಲಿದ ನಲ್ಮೆ ಜೀವ ನೈಜ ಸುಖದ ರೂಪು ಅಲ್ಲ-?
ಬಡಿದು ಬಾಳ ಭಾಗ್ಯವನ್ನು ದ್ರೋಹದಿಂದ-
ಪಡೆವ ಅಲ್ಪ ಹುಸಿಯ ಸುಖದ ಕೆಚ್ಚು ಏಽಕೆ?

ಮೂಡುವೆಟ್ಟ ಹತ್ತುವಾಗ ಸೋಗೆ ಕೇಕೆ ಹಾಕುವಾಗ
ಕಾಡಸೊಬಗು ನೋಡಿ ದಣಿದು ಸೇರಿದಾಗ
ಕೂಡಿ ಬಿಡಿಸಿ ಲೋಕ ಸುಖವ ಪೇಳಿದೆಽಲ್ಲಿ?

ಮೊಸರು ಕಡೆದು ಬೆಣ್ಣೆ ತೂಗೆ, ಕಂದ ಜೋ ಜೊ ಲಾಲಿ ಹಾಡೆ
ಹಸಲೆ ಹುಲ್ಲ ಕುಯ್ಯುವಾಗ್ಗೆ ಹಾಡಿದೇನೊ?-
ಹೊಸತು ಜೋಡಿ ಜೀವ ಸುಖದ ಮರೆತೆಯೇನೊ?

ಕೊಲ್ಲಿಗದ್ದೆ ಅರುವಿಗಾಗಿ, ಹೊನಲು ಹರಿವ ಬಯಲಿಗಾಗಿ
ಬಳ್ಳಿ ಮನೆಯ ಕಟ್ಟಿ ನಲಿವ-ಕಾಡು ಸುಽತ್ತಿ
ಮಲ್ಲಳಿಗಳ ಹಾಡ ಕೇಳೆ ನಡೆವ ಬಾಽರೊ!

ಸೂಜಿದಾರ ಹೊತ್ತು ಹೊತ್ತು ಹೊರುವ ಭಾರ ಅದೇ ಆಯ್ತು!
ಜಾಜಿ ಕೋದು ಯಾರ ಕೊರಳಲಿರಿಸಲೆಂದು
ಸೋಜಿಗದಲಿ ನೆನೆದು ನೆನೆದು-ಸೊರಗಿದೆ ನಾ!

ಬಾವಿ ನೀರ ಸೇದುವಾಗ ಎಸರ ಬೇಯ್ಸಿ ತೆಗೆಯುವಾಗ
ಕವಿದ ಮಂಕ ಕಣ್ಣಿನಿಂದ ಒರಸುವಾಗಽ
ಜೀವಿಗಳ ಈ ಹುಸಿಯ ಬಾಳ ನೆನೆವೆ ನಾಽನೊ!

ನಗುತಲಿರು ನೀ, ನಗುವಿನಲ್ಲಿ ಬಾಳ ಸತ್ಯ ಮೂಡಿ ಬರಲಿ-
ಒಗುವ ಸತ್ಯ ನಲುಮೆಯೆಲ್ಲ-ಒಲುಮೆಯಲ್ಲಿ,
ಸೊಗವನೀಕ್ಷಿಸುತಲೆ ಬರಲಿ-ಆಹಾ ಕಾಽಯೋ!

ಸೂರ್ಯ ಕಾಂತಿ ಬೀಳ್ವ ಮುನ್ನ, ಚಂದ್ರ ಬೆಳಕು ತೋರ್ವ ಮುನ್ನ,
ಕಾರ್ಯಲೋಕ ಶಾಂತಿ ತಲ್ಪ ಸೇರ್ವ ಮುಽನ್ನ,
ಭಾರ್ಯೆ ದುಃಖವಳಿಸೆ, ಪ್ರಿಯಾ-ಬಂದು ಸೇಽರೊ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೧
Next post ಈ ಶಿಕ್ಷೆ ಯಾರಿಗೆಂದು?

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…