ಮಡಿಲು ಬರಿದೇ

ಒಡಲಲ್ಲೊಂದು ಕುಡಿ
ಚಿಗುರಲಿಲ್ಲವೆಂದೇಕೆ
ಹಲುಬುವಿರಿ, ಕುಡಿ
ಗಾಗಿ ಹಂಬಲಿಸಿ ಕೊರಗಿ
ಸೊರಗಿ ಬಾಳನ್ನೇಕೆ
ವ್ಯರ್ಥಗೊಳಿಸಿ ಶೂನ್ಯ
ವನ್ನಾಗಿಸುವಿರಿ
ನಿಮ್ಮದೇನು ರಘುವಂಶ
ಸೂರ್ಯವಂಶವೇ
ಕುಲದೀಪಕನಿಲ್ಲದೆ
ವಂಶ ಅಳಿಯತೆನಲು
ಒಡಲು ಬರಿದಾಗಿಸಿದ
ಆ ದೈವಕೆ ಸಡ್ಡು ಹೊಡೆದು
ನಿಮ್ಮ ಹೃದಯವನ್ನೊಮ್ಮೆ
ವಿಶಾಲಗೊಳಿಸಿ
ಮಮತೆ
ಮರೀಚಿಕೆಯಾಗಿರುವ ಕಂದಮ್ಮಗಳತ್ತ
ದೃಷ್ಠಿಹಾಯಿಸಿ, ತರುವಿಲ್ಲದ ಲತೆಗಳಿಗೆ
ಆಶ್ರಯವಾಗಿ ಬರಿದಾದ ಮಡಿಲ ತುಂಬಿಸಿಕೊಳ್ಳಿ
ಒಡಲು ಬರಿದಾದರೇನು
ಮಡಿಲು ಬರಿದೇ
ಯಾರದೋ ತಪ್ಪಿಗೆ
ಬಲಿಯಾಗಿ ಪರಿತಪಿಸುವ
ಕಂದನಿಗೆ, ಶಾಪವಾಗಿರುವ
ಬಾಳಿಗೆ ವರನೀಡಿ
ಯಾರ ಮನೆಯ ಅಂಗಳದ
ಹೂವೋ ಎಂದು ಜಿಗುಪ್ಸೆ
ತೋರದೆ ಕರೆದೊಯ್ಯಿರಿ ನಿಮ್ಮರ ಮನೆಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂದೆಂದೂ ಕೇಳಲಾಗದ ಪ್ರಶ್ನೆಗಳು
Next post ಉದ್ಯೋಗ ಪರ್ವ

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…