ಸೃಷ್ಟಿಕ್ರಿಯೆ

ಅದಾವ ಕ್ಷಣದಲೊ ಗಮ್ಯತೆ ಸೇರಿ
ಮಾಸವೊಂದರಲ್ಲೇ ಅಸ್ತಿತ್ವ ತೋರಿ
ಅಸ್ಪಷ್ಟತೆಯಲ್ಲೇ ಪ್ರಭಾವ ಬೀರಿ
ನಿನ್ನಾಟ ಒಡಲಲಿ ಬಾರಿ ಮತ್ತೇರಿ

ಸೃಷ್ಟಿಕ್ರಿಯೆಯ ಆ ಕೈಚಳಕ
ಹೊತ್ತು ತಂದಿದೆ ವರ್ಣಿಸಲಾಗದ ಪುಳಕ
ಒದಿವಾಗ ಅವ ಎಡ ಬಲಕ
ರೋಮಾಂಚನದ ಸಿಹಿಸಿಂಚನ ಮನಕ

ನಿನ್ನ ಬರುವಿಕೆಯ ತವಕದಲಿ
ಕ್ಷಣಗಳು ಯುಗವಾಗಿ ಕಳೆಯುತಲಿ
ಮಡಿಲ ತುಂಬುವ ಕನಸಿನಲಿ
ಒಡಲ ಭಾರದಿ ಕುಗ್ಗುತಲಿ

ಮೊಗ್ಗು ಅರಳಿ ನಗುವಾಗ
ಬೀಜ ಮೊಳಕೆಯೊಡೆದು ಸಸಿಯಾದಾಗ
ಮಧುರಾನುಭೂತಿಯ ಸಂಯೋಗ
ಸೃಷ್ಟಿಕ್ರಿಯೆಯ ಹಚ್ಚ ಹೊಸಯುಗ

ಭೂಕಂಪದಲಿ ಧರೆಯ ಒಡಲು ಬಿರಿವಂತೆ
ಕಾನನದಲಿ ಕಾಡ್ಗಿಚ್ಚು ಹತ್ತಿ ಉರಿವಂತೆ
ಜಗದಯಾತನೆಯೆಲ್ಲ ಒಮ್ಮೆಲೆ ಮೇಳೈಯಿಸಿದಂತೆ
ಕಂದನೆ ಒಡಲಿನಿಂದ ಮಡಿಲಿಗಿಳಿದೆ ಪೂರ್ಣಚಂದ್ರನಂತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೆಕ್ಕೆ ಬಿಚ್ಚಿದ ಹಕ್ಕಿ
Next post ಮಹಾನಗರ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys