ಜೀವದ ಒಳಗುಟ್ಟು

ಕರ್ಮದ ಬಾಳಿಗೆ ಮಣ್ಣಿಟ್ಟು
ನೋಡಿದೆ ಜೀವದ ಒಳಗುಟ್ಟು!

ಧರ್ಮಕೆ ಕಸಿಯನು ನಾ ಮಾಡಿ
ತಿಂದೆನೊ ಪಾಪದ ಹಣ್ಣು ಇಡಿ;

ಮೂಡಲ ಸೂರ್ಯನು ಅಲ್ಲಿರನು
ಮನುಜನು ಬುದ್ದಿಯ ತಾಳಿರನು!

ಗಂಟೆಯ ಮುಳ್ಳದು ತಿರುಗಾಡಿ
ಲೋಕಕೆ ಕಲಿಪುದು ಬಲುಮೋಡಿ.

ಸುತ್ತಲು ಮಂಜಿನ ನೆನೆಹನಿ
ಕಣ್ಣಲಿ ಪಾಡಿನ ಮಂಕು ಹನಿ!

ಹೊಂಡವೆ ನೀರಿನ ಸದ್ಯನೆಲೆ,
ಲೋಕ ದಾರಿದ್ರ್‍ಯದ ಕಟ್ಟುಬಲೆ;

ಜೀವನ ಜಿದ್ದಿನ ಜೀಕಲಿನ
ಆಶ್ರಯವಾಗಿದೆ-ಅದೆ ಮಲಿನ!

ಪಾಪಿಯ ನಗುವಿನ ಕಹಿ ಗೆಲುವು
ಯಾರ ಹೃದಯಕೆ ಎಸೆದುಗುಳು?

ಪುಷ್ಪದ ಎಸಳಿನ ಆ ಸೊಗವು
ಮೋಹಿನಿ ತೋರಿದ ಆ ಸೊಬಗು-

ಅಂಗೈ ತೋರಿದ ಭಾಗ್ಯವದು
ಎಲ್ಲಿವರೆಗದು- ಅದೆ ನೆನವು!

ಸೂಜಿಯು ಹೊರುವುದು ದಾರವನು
ಇರುವೆಯು ಹೊರುವುದು ಕಾಳನ್ನು,

ಮರಗಳು ಹೊರುವುವು ಹಣ್ಣನ್ನು
ಮಾನವ ಹೊರುವನು ಪಾಪವನು!

ನಾಯಿಗೆ ನಾಯ್ಗಳು ವೈರಿಗಳು,
ಜನಗಳು ಜನಕೆ ಮೊನೆಮುಳ್ಳು!

ರಕ್ತದ ದಾಹವೆ ಹೃದಯದಲು,
ಕಾಮಿಯ ವಾಣಿಯ ಉಸುರಿನಲು;

ಸತ್ತರು ಮರೆಯರು ಲೋಭವನು,
ಮತ್ಸರ ಬಾಳಿನ ದರ್ಪವನು,

ಮೀನಿಗೆ ಮೀನೇ ಸವಿಯೂಟ
ಸೋದರ ವಧೆಯೇ ನರನಾಟ!

ವಿದ್ಯೆಯು ದ್ರೋಹಿಯ ಮಂಕಾಟ,
ಬಡವನ ವಂಚಿಪ ಹುಸಿಮಾಟ!

ತಿನ್ನುವ ಕಾಳದು ಕರುಳಿನಲಿ
ಉರಳ್ವದು ಮೋಹದ ರಾಟೆಯಲಿ.

ಅದರಿಂ ಸೂರ್ಯನು ಚಂದ್ರನನು
ವಂಚಿಪ ಬಾಳಿನ ತಿರುಳನ್ನು,

ನೋಡುತ ಪೋಗ್ವುದೆ-ಈ ಮಾಯ,
ಮಾಯ ಪ್ರಪಂಚದ ಅಧಿಮಾಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೨
Next post ನನ್ ಚಿನ್ನ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…