Home / ಕವನ / ಕವಿತೆ / ಸೂರ್ಯಾಸ್ತಮಾನ ಸಮಯ

ಸೂರ್ಯಾಸ್ತಮಾನ ಸಮಯ

ಪಡುವಣ ದಿಗಂತದಲಿ ಅಗ್ನಿದೇವನ ಒಂದು
ಕಾಲ್ಚೆಂಡು ಮೇಲ್ಹಾರಿ ಕೆಳಬೀಳ್ವುದೊ!
ಬ್ರಹ್ಮಗಿರಿ ಎಂದೆಂಬ ಬೆಟ್ಟದಾ ಅರುಗಾಗಿ
ದಿನಕರನು ಇಣಿಕಿಣಿಕಿ ಮರೆಸೇರ್ವನೊ!

ಎಲ್ಲಿಂದ ಯಾವೆಡೆಗೆ?  ಯಾವೂರು ಪೋಗ್ವನೊ
ಅಗ್ನಿಯಾ ಚಂಡು ಈ ಕೆಂಬಣ್ಣದೀ;
ಪಡುವಣದ ಪ್ರಾಂತದಲಿ ನೀರು ನೆಲದಲಿ ಎಲ್ಲ
ರಂಗು ಕುಂಕುಮ ಚೆಲ್ಲಿ-ಮುನ್ನೋಡ್ವನು!

ಜೀವ ರಾಶಿಗಳೆಲ್ಲ ಗೂಡು ಸೇರುವ ಪೊಳ್ತು
ಏಳು ವರ್ಣದ ಬಿಲ್ಲು ನಡುಗೋಲಿಯೊ!
ಹಾರಿ ಬಿದ್ದಿತು ಅಲ್ಲಿ, ಪಾಕಡಾಚೆಲಿ ನೋಡು,
ದೇವ ನಾವೆಯ ಒಳಗೆ ತೇಲಿ ಪೋಪಂ!

ತುಳುನಾಡ ಸಂಪಾಜೆ ಘಾಟಿ ದಾಟುತ ಹಾರ್‍ವ
ಪಕ್ಷಿಗಳೊ ಕೂಹೂಹು ಕೂಗಿ ಎಲ್ಲ;
ತಪ್ಪಲಿನ ಬಯಲಿನಲಿ ದುಡಿದು ಹಾಡುತ ಪೋಪರ್‍
ಕಿನಕಾಪು ನೀರಿ ಬೀಸಿ ಹೆಂಗಳೆಲ್ಲ?

ದನವು ಕರಗಳು ಎಲ್ಲ ಮೇಕೇರಿ ಬಯಲಿನಲಿ
ಕರೆ ಕರೆದು ಸೇರಿದವು ಕೊಟ್ಟೆಯನು;
ಕೋಟೆ ಗಂಟೆಯೊ ಆರು ಬಡಿಯೆ ಸೇರಿದರೆಲ್ಲ
ಆಡುತಿಹ ಮಕ್ಕಳೂ ಮನೆ ಸೇರಲು.

ಸಂಜೆ ಸಮಯವೊ ನೋಡು, ತಂಪುಗಾಳಿಯು ಸುತ್ತು,
ಬಾನ್ಕರೆಯಲೊಂದು ಮಗು ಅಳುತಲಿಹುದು,
ತನ್ನ ಮುಗುಳ್ನಗೆಯನ್ನು ಮುದ್ದು ಮಾತುಗಳನ್ನು
ತೋರಿ, ತಾಸಿನ ಕಾಲ ಬಾಳಿ ಇಲ್ಲಿ!

ಬೆಳಕಿನಲಿ ಸುಖವಿಹುದು, ಅದು ಲೋಕನ್ಯಾಯ,
ರಾತ್ರಿ ಕಷ್ಟದ ನಂಟು, ಶೋಕ ಮೂಲ;
ಅಗಲಬೇಡ ನೀ, ಬೇಡ ಸೂರ್ಯದೇವ
ನೋಡಲಾರೆನು ನೀನು ಅಗಲ್ವುದೆಮ್ಮ!

ಸೃಷ್ಠಿ ಚಿತ್ರವ ಜಗಕೆ ತೋರಿ ನೀ ಮಿಗಿಲಿಂ
ಯಾವ ನಾಡೊಳು ಪೋಗಿ ನಿದ್ರಿಸುವಿಯೊ?
ಕಾಡು ಮಾಡನು ಎಲ್ಲ, ಗುಡ್ಡ ಬಯಲಲಿ ಮಲೆಯೊಳ್
ಹೊಂಬೆಳಕ ಚಿಮುಕಿಸುತ ಪೋಪೆ ಎಲ್ಲಿ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...