Home / ಕವನ / ಕವಿತೆ / ಸೂರ್ಯಾಸ್ತಮಾನ ಸಮಯ

ಸೂರ್ಯಾಸ್ತಮಾನ ಸಮಯ

ಪಡುವಣ ದಿಗಂತದಲಿ ಅಗ್ನಿದೇವನ ಒಂದು
ಕಾಲ್ಚೆಂಡು ಮೇಲ್ಹಾರಿ ಕೆಳಬೀಳ್ವುದೊ!
ಬ್ರಹ್ಮಗಿರಿ ಎಂದೆಂಬ ಬೆಟ್ಟದಾ ಅರುಗಾಗಿ
ದಿನಕರನು ಇಣಿಕಿಣಿಕಿ ಮರೆಸೇರ್ವನೊ!

ಎಲ್ಲಿಂದ ಯಾವೆಡೆಗೆ?  ಯಾವೂರು ಪೋಗ್ವನೊ
ಅಗ್ನಿಯಾ ಚಂಡು ಈ ಕೆಂಬಣ್ಣದೀ;
ಪಡುವಣದ ಪ್ರಾಂತದಲಿ ನೀರು ನೆಲದಲಿ ಎಲ್ಲ
ರಂಗು ಕುಂಕುಮ ಚೆಲ್ಲಿ-ಮುನ್ನೋಡ್ವನು!

ಜೀವ ರಾಶಿಗಳೆಲ್ಲ ಗೂಡು ಸೇರುವ ಪೊಳ್ತು
ಏಳು ವರ್ಣದ ಬಿಲ್ಲು ನಡುಗೋಲಿಯೊ!
ಹಾರಿ ಬಿದ್ದಿತು ಅಲ್ಲಿ, ಪಾಕಡಾಚೆಲಿ ನೋಡು,
ದೇವ ನಾವೆಯ ಒಳಗೆ ತೇಲಿ ಪೋಪಂ!

ತುಳುನಾಡ ಸಂಪಾಜೆ ಘಾಟಿ ದಾಟುತ ಹಾರ್‍ವ
ಪಕ್ಷಿಗಳೊ ಕೂಹೂಹು ಕೂಗಿ ಎಲ್ಲ;
ತಪ್ಪಲಿನ ಬಯಲಿನಲಿ ದುಡಿದು ಹಾಡುತ ಪೋಪರ್‍
ಕಿನಕಾಪು ನೀರಿ ಬೀಸಿ ಹೆಂಗಳೆಲ್ಲ?

ದನವು ಕರಗಳು ಎಲ್ಲ ಮೇಕೇರಿ ಬಯಲಿನಲಿ
ಕರೆ ಕರೆದು ಸೇರಿದವು ಕೊಟ್ಟೆಯನು;
ಕೋಟೆ ಗಂಟೆಯೊ ಆರು ಬಡಿಯೆ ಸೇರಿದರೆಲ್ಲ
ಆಡುತಿಹ ಮಕ್ಕಳೂ ಮನೆ ಸೇರಲು.

ಸಂಜೆ ಸಮಯವೊ ನೋಡು, ತಂಪುಗಾಳಿಯು ಸುತ್ತು,
ಬಾನ್ಕರೆಯಲೊಂದು ಮಗು ಅಳುತಲಿಹುದು,
ತನ್ನ ಮುಗುಳ್ನಗೆಯನ್ನು ಮುದ್ದು ಮಾತುಗಳನ್ನು
ತೋರಿ, ತಾಸಿನ ಕಾಲ ಬಾಳಿ ಇಲ್ಲಿ!

ಬೆಳಕಿನಲಿ ಸುಖವಿಹುದು, ಅದು ಲೋಕನ್ಯಾಯ,
ರಾತ್ರಿ ಕಷ್ಟದ ನಂಟು, ಶೋಕ ಮೂಲ;
ಅಗಲಬೇಡ ನೀ, ಬೇಡ ಸೂರ್ಯದೇವ
ನೋಡಲಾರೆನು ನೀನು ಅಗಲ್ವುದೆಮ್ಮ!

ಸೃಷ್ಠಿ ಚಿತ್ರವ ಜಗಕೆ ತೋರಿ ನೀ ಮಿಗಿಲಿಂ
ಯಾವ ನಾಡೊಳು ಪೋಗಿ ನಿದ್ರಿಸುವಿಯೊ?
ಕಾಡು ಮಾಡನು ಎಲ್ಲ, ಗುಡ್ಡ ಬಯಲಲಿ ಮಲೆಯೊಳ್
ಹೊಂಬೆಳಕ ಚಿಮುಕಿಸುತ ಪೋಪೆ ಎಲ್ಲಿ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...