ಸೂರ್ಯಾಸ್ತಮಾನ ಸಮಯ

ಪಡುವಣ ದಿಗಂತದಲಿ ಅಗ್ನಿದೇವನ ಒಂದು
ಕಾಲ್ಚೆಂಡು ಮೇಲ್ಹಾರಿ ಕೆಳಬೀಳ್ವುದೊ!
ಬ್ರಹ್ಮಗಿರಿ ಎಂದೆಂಬ ಬೆಟ್ಟದಾ ಅರುಗಾಗಿ
ದಿನಕರನು ಇಣಿಕಿಣಿಕಿ ಮರೆಸೇರ್ವನೊ!

ಎಲ್ಲಿಂದ ಯಾವೆಡೆಗೆ?  ಯಾವೂರು ಪೋಗ್ವನೊ
ಅಗ್ನಿಯಾ ಚಂಡು ಈ ಕೆಂಬಣ್ಣದೀ;
ಪಡುವಣದ ಪ್ರಾಂತದಲಿ ನೀರು ನೆಲದಲಿ ಎಲ್ಲ
ರಂಗು ಕುಂಕುಮ ಚೆಲ್ಲಿ-ಮುನ್ನೋಡ್ವನು!

ಜೀವ ರಾಶಿಗಳೆಲ್ಲ ಗೂಡು ಸೇರುವ ಪೊಳ್ತು
ಏಳು ವರ್ಣದ ಬಿಲ್ಲು ನಡುಗೋಲಿಯೊ!
ಹಾರಿ ಬಿದ್ದಿತು ಅಲ್ಲಿ, ಪಾಕಡಾಚೆಲಿ ನೋಡು,
ದೇವ ನಾವೆಯ ಒಳಗೆ ತೇಲಿ ಪೋಪಂ!

ತುಳುನಾಡ ಸಂಪಾಜೆ ಘಾಟಿ ದಾಟುತ ಹಾರ್‍ವ
ಪಕ್ಷಿಗಳೊ ಕೂಹೂಹು ಕೂಗಿ ಎಲ್ಲ;
ತಪ್ಪಲಿನ ಬಯಲಿನಲಿ ದುಡಿದು ಹಾಡುತ ಪೋಪರ್‍
ಕಿನಕಾಪು ನೀರಿ ಬೀಸಿ ಹೆಂಗಳೆಲ್ಲ?

ದನವು ಕರಗಳು ಎಲ್ಲ ಮೇಕೇರಿ ಬಯಲಿನಲಿ
ಕರೆ ಕರೆದು ಸೇರಿದವು ಕೊಟ್ಟೆಯನು;
ಕೋಟೆ ಗಂಟೆಯೊ ಆರು ಬಡಿಯೆ ಸೇರಿದರೆಲ್ಲ
ಆಡುತಿಹ ಮಕ್ಕಳೂ ಮನೆ ಸೇರಲು.

ಸಂಜೆ ಸಮಯವೊ ನೋಡು, ತಂಪುಗಾಳಿಯು ಸುತ್ತು,
ಬಾನ್ಕರೆಯಲೊಂದು ಮಗು ಅಳುತಲಿಹುದು,
ತನ್ನ ಮುಗುಳ್ನಗೆಯನ್ನು ಮುದ್ದು ಮಾತುಗಳನ್ನು
ತೋರಿ, ತಾಸಿನ ಕಾಲ ಬಾಳಿ ಇಲ್ಲಿ!

ಬೆಳಕಿನಲಿ ಸುಖವಿಹುದು, ಅದು ಲೋಕನ್ಯಾಯ,
ರಾತ್ರಿ ಕಷ್ಟದ ನಂಟು, ಶೋಕ ಮೂಲ;
ಅಗಲಬೇಡ ನೀ, ಬೇಡ ಸೂರ್ಯದೇವ
ನೋಡಲಾರೆನು ನೀನು ಅಗಲ್ವುದೆಮ್ಮ!

ಸೃಷ್ಠಿ ಚಿತ್ರವ ಜಗಕೆ ತೋರಿ ನೀ ಮಿಗಿಲಿಂ
ಯಾವ ನಾಡೊಳು ಪೋಗಿ ನಿದ್ರಿಸುವಿಯೊ?
ಕಾಡು ಮಾಡನು ಎಲ್ಲ, ಗುಡ್ಡ ಬಯಲಲಿ ಮಲೆಯೊಳ್
ಹೊಂಬೆಳಕ ಚಿಮುಕಿಸುತ ಪೋಪೆ ಎಲ್ಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೩
Next post ಎಳೆದೂ, ಎಳೆದೂ ಇರುಳು

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…