Home / ಕವನ / ಕವಿತೆ / ಕಲ್ಲುಹೋಯಿತು-ಹಣ್ಣಿಲ್ಲ!

ಕಲ್ಲುಹೋಯಿತು-ಹಣ್ಣಿಲ್ಲ!

ಮಾಮರದ ಕೊನರೆಲೆ ಅಂಚಿನಲಿ ಮಿನುಗುವ
ಸಿಹಿಮಾವು ಒಂದು ನೋಡಿ,
ಕಣ್ಣರಳಿ ಮನವುರುಳಿ ತನ್ನಲ್ಲೆ ಚಿಂತಿಸಿತು-
ಬೀಳಿಸಲೆ ಬೇಕು ಎಂದು!

ಮರ ಏರಿ ಇನಿವಣ್ಣ ಕೈಯ್ಯಾರೆ ತರಲೆಂದು
ಯೋಚಿಸಿದೆ ತಲೆಯನೆತ್ತಿ;
ಬೆಳೆದಿತ್ತು ಎತ್ತರಕೆ ತೆಂಗು ಕೌಂಗನು ಮೀರಿ
ನೋಡಿದೆ ನಿರಾಶನಾದೆ!

ಅಹೊ ನೋಡು ತನಿವಣ್ಣು ಹಸುರಳಿದು ಬೆಳೆಸಾಗಿ
ಕಾಣುವುದು ತೂಗಿ ಮೇಲೆ,
ಹಾರೆನೋ ಅದು ಸಾಗ!  ನಾನೊರ್ವ ಅಳಿಮನುಜ
ಜೊಲ್ಲರಿಸಿ ನೋಡಿದೆ ನಾ!

ಭೂರಸ ಸತ್ವವನ್ನಡಗಿಸಿ ಹೆಮ್ಮೆಯಿಂ
ಜೋಲುತಿಹೆ ಮಾವೆ ನೀನು;
ನೆನೆದೊಡೇಂ ನಿನ್ನನೂ ದರ್ಪದಲಿ ಇರಿತಾಗ
ಹಣ್ಗಳಾ ‘ಮಾಂವ’-ಎಂದು!

ನೋಡ್ನೋಡಿ ಬೆಂಡಾಗಿ ಕರತಲದಿ ಕಲ್ಚೂರು
ಒಂದಿಡಿದು ಪೇಳ್ದೆ ನಾನು,
ಎಲೆ ಕಲ್ಲೆ, ನೀ ಹಾರಿ ನುಣುಪಾದ ಆ ಹಣ್ಣ
ತಾರೊ ನೀ ಅಂತೆ ನೀನು!

ನೋವ್ಗೀವು ಮಾಡಬೇಡ, ರಭಸದಿ ಹೊಡಿಬೇಡ
ತೆಳ್ದೂಗಲು ಸುಲಿಯಬೇಡ;
ನನಗಾಗಿ ಹಣ್ಣಿಡಿದ ಇಳಿಕೊಂಬೆಯನು ತಾಗಿ
ಬೀಳಿಸೆಲೊ ಹಣ್ಣ ನೀನು!

ಇದೊ ನಾನು ಕಾಯುವೆನು, ಹಿಡಿದಪ್ಪಿಕೊಳ್ಳುವೆನು,
ನಿನಗಂತು ಋಣಿಯೆ-ಎಂದು
ಬೀಸಿದೆ ನಾ ಕೈಯ್ಯನ್ನು ಹಾರಿಸಿದೆ ಕಲ್ಲನ್ನು
ನೋಡಿದೆನು-ಆ ಹಣ್ಣನ್ನು!

ಅಯ್ಯಯ್ಯೊ ಕಲ್ಲೋಯ್ತು, ಹಣ್ಣಲ್ಲೆ ಇರಿತುಂಟು-
ಬೆಪ್ಪನೇ-ನಾನಾದೆನೊ!
ಅಳಿಮನದ ಹಿರಿಯಾಸೆ-ಕರತಲದ ಕಲ್ಮಣಿಯ
ಕಳಕೊಂಡ ದೀನ ನಾನು!

ಹಣ್ಣದೋ ದರ್ಪದಲಿ ಅಣಕಿಪುದು ನನ್ನೋಡಿ,
ತೂಗುತಿಹುದದೊ ನೋಽಡು!
ಸಿಗಲಾರೆ-ಎಂದು ಅದು ಕೊನರೆಲೆ ಮಧ್ಯದಲಿ
ತಲೆ ಅಲ್ಲಾಡಿಸುತಲಿಹುದು

ಸಾಹಸದ ಸಂಕಲ್ಪದವಸಾನ ಇಷ್ಟರಲಿ
ಕಲ್ಲೋಯ್ತು-ಹಣ್ಣಽಲ್ಲ!
ಹಿರಿದಾದ ಆಸೆಯದು ಜಾರುವುದು-ವಿಧಿನಿಯಮ,
ಯತ್ನದಾ ಮೆಟ್ಟಲಿಂದ!!

ಚಂದಿರನ ಹಿಡಿಯಲು ಕೈಲಾಸ ಆಳಽಲು
ಲೋಕಗಳ ಸುತ್ತಲೆಂದು,
ಹುಸಿಯಾಸೆ ರತ್ನಗಳ ತಾಗೈವ ಯತ್ನದಲಿ
ಬೆರೆಸಽಲು-ಆಗದೇನು?

ಜ್ಞಾನಿಗಳ ಆ ನೀತಿ, ಋಷಿಗಳ ಆ ಸೂಕ್ತಿ
ಗಳಿಗೆ ನಾ ಶರಣು ಇಂದು!
ಮರಳಿ ಯತ್ನವ ಮಾಡಿ, ಮರಳಿ ಸಾಧಿಸು-ಎಂದು
ಪೇಳಲದೊ ಶರಣಾದೆನೊ!!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...