Home / ಕವನ / ಕವಿತೆ / ಕಲ್ಲುಹೋಯಿತು-ಹಣ್ಣಿಲ್ಲ!

ಕಲ್ಲುಹೋಯಿತು-ಹಣ್ಣಿಲ್ಲ!

ಮಾಮರದ ಕೊನರೆಲೆ ಅಂಚಿನಲಿ ಮಿನುಗುವ
ಸಿಹಿಮಾವು ಒಂದು ನೋಡಿ,
ಕಣ್ಣರಳಿ ಮನವುರುಳಿ ತನ್ನಲ್ಲೆ ಚಿಂತಿಸಿತು-
ಬೀಳಿಸಲೆ ಬೇಕು ಎಂದು!

ಮರ ಏರಿ ಇನಿವಣ್ಣ ಕೈಯ್ಯಾರೆ ತರಲೆಂದು
ಯೋಚಿಸಿದೆ ತಲೆಯನೆತ್ತಿ;
ಬೆಳೆದಿತ್ತು ಎತ್ತರಕೆ ತೆಂಗು ಕೌಂಗನು ಮೀರಿ
ನೋಡಿದೆ ನಿರಾಶನಾದೆ!

ಅಹೊ ನೋಡು ತನಿವಣ್ಣು ಹಸುರಳಿದು ಬೆಳೆಸಾಗಿ
ಕಾಣುವುದು ತೂಗಿ ಮೇಲೆ,
ಹಾರೆನೋ ಅದು ಸಾಗ!  ನಾನೊರ್ವ ಅಳಿಮನುಜ
ಜೊಲ್ಲರಿಸಿ ನೋಡಿದೆ ನಾ!

ಭೂರಸ ಸತ್ವವನ್ನಡಗಿಸಿ ಹೆಮ್ಮೆಯಿಂ
ಜೋಲುತಿಹೆ ಮಾವೆ ನೀನು;
ನೆನೆದೊಡೇಂ ನಿನ್ನನೂ ದರ್ಪದಲಿ ಇರಿತಾಗ
ಹಣ್ಗಳಾ ‘ಮಾಂವ’-ಎಂದು!

ನೋಡ್ನೋಡಿ ಬೆಂಡಾಗಿ ಕರತಲದಿ ಕಲ್ಚೂರು
ಒಂದಿಡಿದು ಪೇಳ್ದೆ ನಾನು,
ಎಲೆ ಕಲ್ಲೆ, ನೀ ಹಾರಿ ನುಣುಪಾದ ಆ ಹಣ್ಣ
ತಾರೊ ನೀ ಅಂತೆ ನೀನು!

ನೋವ್ಗೀವು ಮಾಡಬೇಡ, ರಭಸದಿ ಹೊಡಿಬೇಡ
ತೆಳ್ದೂಗಲು ಸುಲಿಯಬೇಡ;
ನನಗಾಗಿ ಹಣ್ಣಿಡಿದ ಇಳಿಕೊಂಬೆಯನು ತಾಗಿ
ಬೀಳಿಸೆಲೊ ಹಣ್ಣ ನೀನು!

ಇದೊ ನಾನು ಕಾಯುವೆನು, ಹಿಡಿದಪ್ಪಿಕೊಳ್ಳುವೆನು,
ನಿನಗಂತು ಋಣಿಯೆ-ಎಂದು
ಬೀಸಿದೆ ನಾ ಕೈಯ್ಯನ್ನು ಹಾರಿಸಿದೆ ಕಲ್ಲನ್ನು
ನೋಡಿದೆನು-ಆ ಹಣ್ಣನ್ನು!

ಅಯ್ಯಯ್ಯೊ ಕಲ್ಲೋಯ್ತು, ಹಣ್ಣಲ್ಲೆ ಇರಿತುಂಟು-
ಬೆಪ್ಪನೇ-ನಾನಾದೆನೊ!
ಅಳಿಮನದ ಹಿರಿಯಾಸೆ-ಕರತಲದ ಕಲ್ಮಣಿಯ
ಕಳಕೊಂಡ ದೀನ ನಾನು!

ಹಣ್ಣದೋ ದರ್ಪದಲಿ ಅಣಕಿಪುದು ನನ್ನೋಡಿ,
ತೂಗುತಿಹುದದೊ ನೋಽಡು!
ಸಿಗಲಾರೆ-ಎಂದು ಅದು ಕೊನರೆಲೆ ಮಧ್ಯದಲಿ
ತಲೆ ಅಲ್ಲಾಡಿಸುತಲಿಹುದು

ಸಾಹಸದ ಸಂಕಲ್ಪದವಸಾನ ಇಷ್ಟರಲಿ
ಕಲ್ಲೋಯ್ತು-ಹಣ್ಣಽಲ್ಲ!
ಹಿರಿದಾದ ಆಸೆಯದು ಜಾರುವುದು-ವಿಧಿನಿಯಮ,
ಯತ್ನದಾ ಮೆಟ್ಟಲಿಂದ!!

ಚಂದಿರನ ಹಿಡಿಯಲು ಕೈಲಾಸ ಆಳಽಲು
ಲೋಕಗಳ ಸುತ್ತಲೆಂದು,
ಹುಸಿಯಾಸೆ ರತ್ನಗಳ ತಾಗೈವ ಯತ್ನದಲಿ
ಬೆರೆಸಽಲು-ಆಗದೇನು?

ಜ್ಞಾನಿಗಳ ಆ ನೀತಿ, ಋಷಿಗಳ ಆ ಸೂಕ್ತಿ
ಗಳಿಗೆ ನಾ ಶರಣು ಇಂದು!
ಮರಳಿ ಯತ್ನವ ಮಾಡಿ, ಮರಳಿ ಸಾಧಿಸು-ಎಂದು
ಪೇಳಲದೊ ಶರಣಾದೆನೊ!!
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ