Home / ಕವನ / ಕವಿತೆ / ಕಲ್ಲುಹೋಯಿತು-ಹಣ್ಣಿಲ್ಲ!

ಕಲ್ಲುಹೋಯಿತು-ಹಣ್ಣಿಲ್ಲ!

ಮಾಮರದ ಕೊನರೆಲೆ ಅಂಚಿನಲಿ ಮಿನುಗುವ
ಸಿಹಿಮಾವು ಒಂದು ನೋಡಿ,
ಕಣ್ಣರಳಿ ಮನವುರುಳಿ ತನ್ನಲ್ಲೆ ಚಿಂತಿಸಿತು-
ಬೀಳಿಸಲೆ ಬೇಕು ಎಂದು!

ಮರ ಏರಿ ಇನಿವಣ್ಣ ಕೈಯ್ಯಾರೆ ತರಲೆಂದು
ಯೋಚಿಸಿದೆ ತಲೆಯನೆತ್ತಿ;
ಬೆಳೆದಿತ್ತು ಎತ್ತರಕೆ ತೆಂಗು ಕೌಂಗನು ಮೀರಿ
ನೋಡಿದೆ ನಿರಾಶನಾದೆ!

ಅಹೊ ನೋಡು ತನಿವಣ್ಣು ಹಸುರಳಿದು ಬೆಳೆಸಾಗಿ
ಕಾಣುವುದು ತೂಗಿ ಮೇಲೆ,
ಹಾರೆನೋ ಅದು ಸಾಗ!  ನಾನೊರ್ವ ಅಳಿಮನುಜ
ಜೊಲ್ಲರಿಸಿ ನೋಡಿದೆ ನಾ!

ಭೂರಸ ಸತ್ವವನ್ನಡಗಿಸಿ ಹೆಮ್ಮೆಯಿಂ
ಜೋಲುತಿಹೆ ಮಾವೆ ನೀನು;
ನೆನೆದೊಡೇಂ ನಿನ್ನನೂ ದರ್ಪದಲಿ ಇರಿತಾಗ
ಹಣ್ಗಳಾ ‘ಮಾಂವ’-ಎಂದು!

ನೋಡ್ನೋಡಿ ಬೆಂಡಾಗಿ ಕರತಲದಿ ಕಲ್ಚೂರು
ಒಂದಿಡಿದು ಪೇಳ್ದೆ ನಾನು,
ಎಲೆ ಕಲ್ಲೆ, ನೀ ಹಾರಿ ನುಣುಪಾದ ಆ ಹಣ್ಣ
ತಾರೊ ನೀ ಅಂತೆ ನೀನು!

ನೋವ್ಗೀವು ಮಾಡಬೇಡ, ರಭಸದಿ ಹೊಡಿಬೇಡ
ತೆಳ್ದೂಗಲು ಸುಲಿಯಬೇಡ;
ನನಗಾಗಿ ಹಣ್ಣಿಡಿದ ಇಳಿಕೊಂಬೆಯನು ತಾಗಿ
ಬೀಳಿಸೆಲೊ ಹಣ್ಣ ನೀನು!

ಇದೊ ನಾನು ಕಾಯುವೆನು, ಹಿಡಿದಪ್ಪಿಕೊಳ್ಳುವೆನು,
ನಿನಗಂತು ಋಣಿಯೆ-ಎಂದು
ಬೀಸಿದೆ ನಾ ಕೈಯ್ಯನ್ನು ಹಾರಿಸಿದೆ ಕಲ್ಲನ್ನು
ನೋಡಿದೆನು-ಆ ಹಣ್ಣನ್ನು!

ಅಯ್ಯಯ್ಯೊ ಕಲ್ಲೋಯ್ತು, ಹಣ್ಣಲ್ಲೆ ಇರಿತುಂಟು-
ಬೆಪ್ಪನೇ-ನಾನಾದೆನೊ!
ಅಳಿಮನದ ಹಿರಿಯಾಸೆ-ಕರತಲದ ಕಲ್ಮಣಿಯ
ಕಳಕೊಂಡ ದೀನ ನಾನು!

ಹಣ್ಣದೋ ದರ್ಪದಲಿ ಅಣಕಿಪುದು ನನ್ನೋಡಿ,
ತೂಗುತಿಹುದದೊ ನೋಽಡು!
ಸಿಗಲಾರೆ-ಎಂದು ಅದು ಕೊನರೆಲೆ ಮಧ್ಯದಲಿ
ತಲೆ ಅಲ್ಲಾಡಿಸುತಲಿಹುದು

ಸಾಹಸದ ಸಂಕಲ್ಪದವಸಾನ ಇಷ್ಟರಲಿ
ಕಲ್ಲೋಯ್ತು-ಹಣ್ಣಽಲ್ಲ!
ಹಿರಿದಾದ ಆಸೆಯದು ಜಾರುವುದು-ವಿಧಿನಿಯಮ,
ಯತ್ನದಾ ಮೆಟ್ಟಲಿಂದ!!

ಚಂದಿರನ ಹಿಡಿಯಲು ಕೈಲಾಸ ಆಳಽಲು
ಲೋಕಗಳ ಸುತ್ತಲೆಂದು,
ಹುಸಿಯಾಸೆ ರತ್ನಗಳ ತಾಗೈವ ಯತ್ನದಲಿ
ಬೆರೆಸಽಲು-ಆಗದೇನು?

ಜ್ಞಾನಿಗಳ ಆ ನೀತಿ, ಋಷಿಗಳ ಆ ಸೂಕ್ತಿ
ಗಳಿಗೆ ನಾ ಶರಣು ಇಂದು!
ಮರಳಿ ಯತ್ನವ ಮಾಡಿ, ಮರಳಿ ಸಾಧಿಸು-ಎಂದು
ಪೇಳಲದೊ ಶರಣಾದೆನೊ!!
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...