Home / ಕವನ / ಕವಿತೆ / ಕಲ್ಲುಹೋಯಿತು-ಹಣ್ಣಿಲ್ಲ!

ಕಲ್ಲುಹೋಯಿತು-ಹಣ್ಣಿಲ್ಲ!

ಮಾಮರದ ಕೊನರೆಲೆ ಅಂಚಿನಲಿ ಮಿನುಗುವ
ಸಿಹಿಮಾವು ಒಂದು ನೋಡಿ,
ಕಣ್ಣರಳಿ ಮನವುರುಳಿ ತನ್ನಲ್ಲೆ ಚಿಂತಿಸಿತು-
ಬೀಳಿಸಲೆ ಬೇಕು ಎಂದು!

ಮರ ಏರಿ ಇನಿವಣ್ಣ ಕೈಯ್ಯಾರೆ ತರಲೆಂದು
ಯೋಚಿಸಿದೆ ತಲೆಯನೆತ್ತಿ;
ಬೆಳೆದಿತ್ತು ಎತ್ತರಕೆ ತೆಂಗು ಕೌಂಗನು ಮೀರಿ
ನೋಡಿದೆ ನಿರಾಶನಾದೆ!

ಅಹೊ ನೋಡು ತನಿವಣ್ಣು ಹಸುರಳಿದು ಬೆಳೆಸಾಗಿ
ಕಾಣುವುದು ತೂಗಿ ಮೇಲೆ,
ಹಾರೆನೋ ಅದು ಸಾಗ!  ನಾನೊರ್ವ ಅಳಿಮನುಜ
ಜೊಲ್ಲರಿಸಿ ನೋಡಿದೆ ನಾ!

ಭೂರಸ ಸತ್ವವನ್ನಡಗಿಸಿ ಹೆಮ್ಮೆಯಿಂ
ಜೋಲುತಿಹೆ ಮಾವೆ ನೀನು;
ನೆನೆದೊಡೇಂ ನಿನ್ನನೂ ದರ್ಪದಲಿ ಇರಿತಾಗ
ಹಣ್ಗಳಾ ‘ಮಾಂವ’-ಎಂದು!

ನೋಡ್ನೋಡಿ ಬೆಂಡಾಗಿ ಕರತಲದಿ ಕಲ್ಚೂರು
ಒಂದಿಡಿದು ಪೇಳ್ದೆ ನಾನು,
ಎಲೆ ಕಲ್ಲೆ, ನೀ ಹಾರಿ ನುಣುಪಾದ ಆ ಹಣ್ಣ
ತಾರೊ ನೀ ಅಂತೆ ನೀನು!

ನೋವ್ಗೀವು ಮಾಡಬೇಡ, ರಭಸದಿ ಹೊಡಿಬೇಡ
ತೆಳ್ದೂಗಲು ಸುಲಿಯಬೇಡ;
ನನಗಾಗಿ ಹಣ್ಣಿಡಿದ ಇಳಿಕೊಂಬೆಯನು ತಾಗಿ
ಬೀಳಿಸೆಲೊ ಹಣ್ಣ ನೀನು!

ಇದೊ ನಾನು ಕಾಯುವೆನು, ಹಿಡಿದಪ್ಪಿಕೊಳ್ಳುವೆನು,
ನಿನಗಂತು ಋಣಿಯೆ-ಎಂದು
ಬೀಸಿದೆ ನಾ ಕೈಯ್ಯನ್ನು ಹಾರಿಸಿದೆ ಕಲ್ಲನ್ನು
ನೋಡಿದೆನು-ಆ ಹಣ್ಣನ್ನು!

ಅಯ್ಯಯ್ಯೊ ಕಲ್ಲೋಯ್ತು, ಹಣ್ಣಲ್ಲೆ ಇರಿತುಂಟು-
ಬೆಪ್ಪನೇ-ನಾನಾದೆನೊ!
ಅಳಿಮನದ ಹಿರಿಯಾಸೆ-ಕರತಲದ ಕಲ್ಮಣಿಯ
ಕಳಕೊಂಡ ದೀನ ನಾನು!

ಹಣ್ಣದೋ ದರ್ಪದಲಿ ಅಣಕಿಪುದು ನನ್ನೋಡಿ,
ತೂಗುತಿಹುದದೊ ನೋಽಡು!
ಸಿಗಲಾರೆ-ಎಂದು ಅದು ಕೊನರೆಲೆ ಮಧ್ಯದಲಿ
ತಲೆ ಅಲ್ಲಾಡಿಸುತಲಿಹುದು

ಸಾಹಸದ ಸಂಕಲ್ಪದವಸಾನ ಇಷ್ಟರಲಿ
ಕಲ್ಲೋಯ್ತು-ಹಣ್ಣಽಲ್ಲ!
ಹಿರಿದಾದ ಆಸೆಯದು ಜಾರುವುದು-ವಿಧಿನಿಯಮ,
ಯತ್ನದಾ ಮೆಟ್ಟಲಿಂದ!!

ಚಂದಿರನ ಹಿಡಿಯಲು ಕೈಲಾಸ ಆಳಽಲು
ಲೋಕಗಳ ಸುತ್ತಲೆಂದು,
ಹುಸಿಯಾಸೆ ರತ್ನಗಳ ತಾಗೈವ ಯತ್ನದಲಿ
ಬೆರೆಸಽಲು-ಆಗದೇನು?

ಜ್ಞಾನಿಗಳ ಆ ನೀತಿ, ಋಷಿಗಳ ಆ ಸೂಕ್ತಿ
ಗಳಿಗೆ ನಾ ಶರಣು ಇಂದು!
ಮರಳಿ ಯತ್ನವ ಮಾಡಿ, ಮರಳಿ ಸಾಧಿಸು-ಎಂದು
ಪೇಳಲದೊ ಶರಣಾದೆನೊ!!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...