Home / ಕವನ / ಕವಿತೆ / ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಅಷ್ಟಗಲ ಬಾಯಿ ತೆರೆದು
ಗುಂಡಿಯಿಲ್ಲದ ನನ್ನ ಪ್ಯಾಂಟ್ಸಿನ ಹಾಗೇ
ನಗಬೇಡ ನನೆದುರು ಕುಳಿತು
ಮರೆತು ಹೋದ್ದಲ್ಲ
ಜನಕ್ಕೆ ಅಗೌರವ ತೋರಿಸುತೇನೆ
ಎಂದಲ್ಲ
ಮುಖ್ಯ ಇದಕ್ಕೆ ಬಟನ್ಸೆ ಇಲ್ಲ.
ನೀ ನಗುತೀಯ!
ಹುಟ್ಟಿಬಂದಾಗ ಮಾತು ಕೊಟ್ಟದ್ದುಂಟೆ
ಪ್ಯಾಂಟ್ಸು ಹಾಕುತ್ತೇನೆ
ಬಟನ್ಸ್ ಇರಿಸುತ್ತೇನೆ ಎಂದೆಲ್ಲ?
ತಪ್ಪು ಮುತ್ತಜ್ಜ ಆಡಮನದು
ಅಲ್ಲ ಮುತ್ತಜ್ಜಿಯದೊ?
ಬಾ. ಯಾಕೆ ಈ ಮುಖವಾಡ?
ಒಂದಿಷ್ಟು ಬಂಧನರಹಿತರಾಗಿ ಓಡಾಡೋಣ
ಮನ ಬಯಸಿದಲ್ಲಿ, ಬಯಸಿದ ಹಾಗೆ.
ನೋಡುತ್ತೇನೆ ನಿನ್ನ ಸೌಂದರ್ಯ
ಅಷ್ಟು ಜೋಪಾನಿಸಿದ್ದು ಯಾವ ನಿಧಿ?
ಅಷ್ಟು ಕಾಪಾಡಿದ್ದು ಯಾವ ಕಾಮಲತೆ?
ಇಷ್ಟಕ್ಕೆ ಎಷ್ಟಯ್ಯ ಬೆಲೆ?
ಸ್ವಾಮಿ. ಮೀಟರಿಗೆ ನಲವತ್ತು!
ನನಗೆ ನಾನೇ ಕೇಳಿ ಪಡೆದ ಅಕ್ಷಯವಸನ
ಆವರಣ
ಈ ಕೌಪೀನ
ಇದು ಮನ್ವಂತರಗಳ ಮಾನಸಿಕ ದೌರ್ಬಲ್ಯದ ನಿ –
ಶಾನೆ – ನಾನೆ ಹುಟ್ಟಿಸಿಕೊಂಡ ಕೃತಕ ನಾಗರಿ –
ಕತೆಯ ಹಳೆ ಹೊಸ ಏಳುನೂರು ಬಂ –
ಧನದ ಏಕಾಧಿಪತ್ಯದ ಸಾಕ್ಷಿ. ಹಾವು
ಪರೆ ಕಳಚಿದಂತೆ ಒಂದೊಂದೆ ಜಾಡಿಸಿ
ಮಹಾವೀರನಾಗಲೆ?
ದಿಗಂಬರನಾಗಿ ಪರ್ವತದಿಂದ ಹೇಳಲೆ
ಪರ್ವತ ಗೀತೆ?
ಹೇಳಿದರೆ ವಿಷಕುಡಿಸಿ ನನ್ನ ಕೊಂದೀಯ ನೀನೆ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...