Home / ಕವನ / ಕವಿತೆ / ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಅಷ್ಟಗಲ ಬಾಯಿ ತೆರೆದು
ಗುಂಡಿಯಿಲ್ಲದ ನನ್ನ ಪ್ಯಾಂಟ್ಸಿನ ಹಾಗೇ
ನಗಬೇಡ ನನೆದುರು ಕುಳಿತು
ಮರೆತು ಹೋದ್ದಲ್ಲ
ಜನಕ್ಕೆ ಅಗೌರವ ತೋರಿಸುತೇನೆ
ಎಂದಲ್ಲ
ಮುಖ್ಯ ಇದಕ್ಕೆ ಬಟನ್ಸೆ ಇಲ್ಲ.
ನೀ ನಗುತೀಯ!
ಹುಟ್ಟಿಬಂದಾಗ ಮಾತು ಕೊಟ್ಟದ್ದುಂಟೆ
ಪ್ಯಾಂಟ್ಸು ಹಾಕುತ್ತೇನೆ
ಬಟನ್ಸ್ ಇರಿಸುತ್ತೇನೆ ಎಂದೆಲ್ಲ?
ತಪ್ಪು ಮುತ್ತಜ್ಜ ಆಡಮನದು
ಅಲ್ಲ ಮುತ್ತಜ್ಜಿಯದೊ?
ಬಾ. ಯಾಕೆ ಈ ಮುಖವಾಡ?
ಒಂದಿಷ್ಟು ಬಂಧನರಹಿತರಾಗಿ ಓಡಾಡೋಣ
ಮನ ಬಯಸಿದಲ್ಲಿ, ಬಯಸಿದ ಹಾಗೆ.
ನೋಡುತ್ತೇನೆ ನಿನ್ನ ಸೌಂದರ್ಯ
ಅಷ್ಟು ಜೋಪಾನಿಸಿದ್ದು ಯಾವ ನಿಧಿ?
ಅಷ್ಟು ಕಾಪಾಡಿದ್ದು ಯಾವ ಕಾಮಲತೆ?
ಇಷ್ಟಕ್ಕೆ ಎಷ್ಟಯ್ಯ ಬೆಲೆ?
ಸ್ವಾಮಿ. ಮೀಟರಿಗೆ ನಲವತ್ತು!
ನನಗೆ ನಾನೇ ಕೇಳಿ ಪಡೆದ ಅಕ್ಷಯವಸನ
ಆವರಣ
ಈ ಕೌಪೀನ
ಇದು ಮನ್ವಂತರಗಳ ಮಾನಸಿಕ ದೌರ್ಬಲ್ಯದ ನಿ –
ಶಾನೆ – ನಾನೆ ಹುಟ್ಟಿಸಿಕೊಂಡ ಕೃತಕ ನಾಗರಿ –
ಕತೆಯ ಹಳೆ ಹೊಸ ಏಳುನೂರು ಬಂ –
ಧನದ ಏಕಾಧಿಪತ್ಯದ ಸಾಕ್ಷಿ. ಹಾವು
ಪರೆ ಕಳಚಿದಂತೆ ಒಂದೊಂದೆ ಜಾಡಿಸಿ
ಮಹಾವೀರನಾಗಲೆ?
ದಿಗಂಬರನಾಗಿ ಪರ್ವತದಿಂದ ಹೇಳಲೆ
ಪರ್ವತ ಗೀತೆ?
ಹೇಳಿದರೆ ವಿಷಕುಡಿಸಿ ನನ್ನ ಕೊಂದೀಯ ನೀನೆ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...