Home / ಕವನ / ಕವಿತೆ / ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಅಷ್ಟಗಲ ಬಾಯಿ ತೆರೆದು
ಗುಂಡಿಯಿಲ್ಲದ ನನ್ನ ಪ್ಯಾಂಟ್ಸಿನ ಹಾಗೇ
ನಗಬೇಡ ನನೆದುರು ಕುಳಿತು
ಮರೆತು ಹೋದ್ದಲ್ಲ
ಜನಕ್ಕೆ ಅಗೌರವ ತೋರಿಸುತೇನೆ
ಎಂದಲ್ಲ
ಮುಖ್ಯ ಇದಕ್ಕೆ ಬಟನ್ಸೆ ಇಲ್ಲ.
ನೀ ನಗುತೀಯ!
ಹುಟ್ಟಿಬಂದಾಗ ಮಾತು ಕೊಟ್ಟದ್ದುಂಟೆ
ಪ್ಯಾಂಟ್ಸು ಹಾಕುತ್ತೇನೆ
ಬಟನ್ಸ್ ಇರಿಸುತ್ತೇನೆ ಎಂದೆಲ್ಲ?
ತಪ್ಪು ಮುತ್ತಜ್ಜ ಆಡಮನದು
ಅಲ್ಲ ಮುತ್ತಜ್ಜಿಯದೊ?
ಬಾ. ಯಾಕೆ ಈ ಮುಖವಾಡ?
ಒಂದಿಷ್ಟು ಬಂಧನರಹಿತರಾಗಿ ಓಡಾಡೋಣ
ಮನ ಬಯಸಿದಲ್ಲಿ, ಬಯಸಿದ ಹಾಗೆ.
ನೋಡುತ್ತೇನೆ ನಿನ್ನ ಸೌಂದರ್ಯ
ಅಷ್ಟು ಜೋಪಾನಿಸಿದ್ದು ಯಾವ ನಿಧಿ?
ಅಷ್ಟು ಕಾಪಾಡಿದ್ದು ಯಾವ ಕಾಮಲತೆ?
ಇಷ್ಟಕ್ಕೆ ಎಷ್ಟಯ್ಯ ಬೆಲೆ?
ಸ್ವಾಮಿ. ಮೀಟರಿಗೆ ನಲವತ್ತು!
ನನಗೆ ನಾನೇ ಕೇಳಿ ಪಡೆದ ಅಕ್ಷಯವಸನ
ಆವರಣ
ಈ ಕೌಪೀನ
ಇದು ಮನ್ವಂತರಗಳ ಮಾನಸಿಕ ದೌರ್ಬಲ್ಯದ ನಿ –
ಶಾನೆ – ನಾನೆ ಹುಟ್ಟಿಸಿಕೊಂಡ ಕೃತಕ ನಾಗರಿ –
ಕತೆಯ ಹಳೆ ಹೊಸ ಏಳುನೂರು ಬಂ –
ಧನದ ಏಕಾಧಿಪತ್ಯದ ಸಾಕ್ಷಿ. ಹಾವು
ಪರೆ ಕಳಚಿದಂತೆ ಒಂದೊಂದೆ ಜಾಡಿಸಿ
ಮಹಾವೀರನಾಗಲೆ?
ದಿಗಂಬರನಾಗಿ ಪರ್ವತದಿಂದ ಹೇಳಲೆ
ಪರ್ವತ ಗೀತೆ?
ಹೇಳಿದರೆ ವಿಷಕುಡಿಸಿ ನನ್ನ ಕೊಂದೀಯ ನೀನೆ!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...