Home / ಕವನ / ಕವಿತೆ / ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಅಷ್ಟಗಲ ಬಾಯಿ ತೆರೆದು
ಗುಂಡಿಯಿಲ್ಲದ ನನ್ನ ಪ್ಯಾಂಟ್ಸಿನ ಹಾಗೇ
ನಗಬೇಡ ನನೆದುರು ಕುಳಿತು
ಮರೆತು ಹೋದ್ದಲ್ಲ
ಜನಕ್ಕೆ ಅಗೌರವ ತೋರಿಸುತೇನೆ
ಎಂದಲ್ಲ
ಮುಖ್ಯ ಇದಕ್ಕೆ ಬಟನ್ಸೆ ಇಲ್ಲ.
ನೀ ನಗುತೀಯ!
ಹುಟ್ಟಿಬಂದಾಗ ಮಾತು ಕೊಟ್ಟದ್ದುಂಟೆ
ಪ್ಯಾಂಟ್ಸು ಹಾಕುತ್ತೇನೆ
ಬಟನ್ಸ್ ಇರಿಸುತ್ತೇನೆ ಎಂದೆಲ್ಲ?
ತಪ್ಪು ಮುತ್ತಜ್ಜ ಆಡಮನದು
ಅಲ್ಲ ಮುತ್ತಜ್ಜಿಯದೊ?
ಬಾ. ಯಾಕೆ ಈ ಮುಖವಾಡ?
ಒಂದಿಷ್ಟು ಬಂಧನರಹಿತರಾಗಿ ಓಡಾಡೋಣ
ಮನ ಬಯಸಿದಲ್ಲಿ, ಬಯಸಿದ ಹಾಗೆ.
ನೋಡುತ್ತೇನೆ ನಿನ್ನ ಸೌಂದರ್ಯ
ಅಷ್ಟು ಜೋಪಾನಿಸಿದ್ದು ಯಾವ ನಿಧಿ?
ಅಷ್ಟು ಕಾಪಾಡಿದ್ದು ಯಾವ ಕಾಮಲತೆ?
ಇಷ್ಟಕ್ಕೆ ಎಷ್ಟಯ್ಯ ಬೆಲೆ?
ಸ್ವಾಮಿ. ಮೀಟರಿಗೆ ನಲವತ್ತು!
ನನಗೆ ನಾನೇ ಕೇಳಿ ಪಡೆದ ಅಕ್ಷಯವಸನ
ಆವರಣ
ಈ ಕೌಪೀನ
ಇದು ಮನ್ವಂತರಗಳ ಮಾನಸಿಕ ದೌರ್ಬಲ್ಯದ ನಿ –
ಶಾನೆ – ನಾನೆ ಹುಟ್ಟಿಸಿಕೊಂಡ ಕೃತಕ ನಾಗರಿ –
ಕತೆಯ ಹಳೆ ಹೊಸ ಏಳುನೂರು ಬಂ –
ಧನದ ಏಕಾಧಿಪತ್ಯದ ಸಾಕ್ಷಿ. ಹಾವು
ಪರೆ ಕಳಚಿದಂತೆ ಒಂದೊಂದೆ ಜಾಡಿಸಿ
ಮಹಾವೀರನಾಗಲೆ?
ದಿಗಂಬರನಾಗಿ ಪರ್ವತದಿಂದ ಹೇಳಲೆ
ಪರ್ವತ ಗೀತೆ?
ಹೇಳಿದರೆ ವಿಷಕುಡಿಸಿ ನನ್ನ ಕೊಂದೀಯ ನೀನೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...