Home / ಕವನ / ಕವಿತೆ / ಸಮರ್ಥನೆ : ಗಂಡ

ಸಮರ್ಥನೆ : ಗಂಡ

ನಿನ್ನ ದಮ್ಮಯ್ಯ
ತಪ್ಪು ತಿಳಿಕೋಬೇಡ ನನ್ನ
ತಿಂದದ್ದೆ ತಿಂದು ಜಗಿದದ್ದೆ ಜಗಿದು
ಬರುತಿದೆ ನನಗೆ ವಾಕರಿಕೆ ಅಷ್ಟೆ
ತಿಳಿಸಾರು, ಹುಳಿ ಸಾಂಬಾರು, ಹುರಿದ ಮೀನು
ಅನ್ನ ಮೊಸರು – ನಾ ಹುಟ್ಟಿದಂದಿನಿಂದ ಮುಕ್ಕಿದ್ದು.
ಬದುಕಬೇಕಲ್ಲ ಎಂದು
ನುಂಗುತಿದ್ದೇನೆ – ಒಗ್ಗರಣೆ ಹಾಕಿದರು
ನನಗೆ ರುಚಿಯಿಲ್ಲ.
ಹಾಗೆ ಬೇಕಾದರೆ
ನಮ್ಮ ಮದುವೆಗೆ ಮೊದಲೆ
ಇಲ್ಲಿ ಕೆಲಸಕ್ಕಿದ್ದ
ಪಾರು ಕುಟ್ಟಿಯ ಟಗರು ಮರಿಗಳಂತಹ ನಾಲ್ಕು
ಗಂಡು ಮಕ್ಕಳ ಸಾಕ್ಷಿ
ಒಂದು ಕಾಲಕ್ಕೆ
ರಾತ್ರಿಯೊಂದರಲಿ ನಾಲ್ಕು ಚದುರೆಯರೊಡನೆ
ಚದುರಂಗವಾಡಿ ಗೆದ್ದವನು ನಾನು
ಹೆಚ್ಚೇಕೆ?
ಮೊದಲ ರಾತ್ರಿ ಗುಟುರು ಹಾಕಿ ನಾ
ಹೋರಿ ಬಂದಾಗ
ಹ್ಹಾ ಎಂದು ನೀನೆ
ತೆವಳಲಿಲ್ಲವೆ?
ಮನಸ್ಸಿಗೇನೋ ಬೇಕು
ಮಾಂಸ ದುರ್ಬಲ ನೋಡು.
ಬೆಕ್ಕಿಗಿಕ್ಕಿದ ಹಾಗೆ ಇಕ್ಕಿದರೆ ನಿನಗೆ
ಸಾಕಾಗುವುದಿಲ್ಲ ಭಾರಿ ಹೊಟ್ಟೆ ಬಾಕಿ!
ಈಗ ಗೊತ್ತಾಯ್ತೆ
ಜೋಲು ಮೊಲೆಗಳ ಮುದುಕ
ಸುಕ್ಕು ಮೋರೆಯ ಮುದುಕಿ
ಗುಟ್ಟು ಮಾತಿನಲಿ ನಡೆಸಿದ ಮಸಲತ್ತು?
ಗಲ್ಲಿಯಲೊ ಓಣಿಯಲೊ
ಬೇಕಾದಲ್ಲಿ ಸುತ್ತಿ
ಕದ್ದೊ, ಕೇಳಿಯೊ, ಪಡೆದೊ ತಿನ್ನಬಹುದಾದ
ಹುಟ್ಟುಸ್ವಾತಂತ್ರ್ಯಕ್ಕೆ ಹಾಕಿದರು ಸಂಕೋಲೆ.
ನೀನು ಬಯಸಿದ್ದಲ್ಲ
ನಾನು ಕೇಳಿದ್ದಲ್ಲ
ಯಾರ ಉದ್ಧಾರಕ್ಕೆ ಈ ಯಜ್ಞ?
ನಿನಗೆ ತಿಳಿದರಿಲಿಲ್ಲ ಮೊದಲೆ
ನನಗೆ ಸಂಶಯವಿತ್ತು
ಆದರೂ ನನ್ನ ಸೊಂಟದ ಸುತ್ತ
ಹಣಿಕಿ ಹಾಕುವ ಕುತೂಹಲ ನಿನಗೆ
ನನಗೊ ಕಲ್ಲು ತಪ್ಪಿಸಿಕೊಂಡು ಓಡಿ ಸಾಕಾಗಿ
ಕೊನೆಗೆ ನನ್ನದೇ ಒಂದು ಹೆಂಡತಿ ಇರಲಿ – ಎಂದು
– ಅಂತು ಹೀಗೆ
ಒಂದೆ ತಾಳಿಯಲಿ ಇಬ್ಬರಿಗೆ ಗಾಳ.
ನಮ್ಮ ಜೈಲಿನ ಒಳಗೆ ನಾವು ಕುಳಿತಿರುವುದಕೆ
ಇದು ಲೀಗಲ್ ಪರ್ಮಿಟು
ಈ ಜೈಲು ನನ್ನ ನಿನ್ನ
ಮುತ್ತಜ್ಜರ ಸೇನೆ ಕಲ್ಲು ಹೊತ್ತು ಕಟ್ಟಿದ್ದು
ನಮ್ಮದೂ ಸಂದಿದೆ ಇದಕೆ ಅಳಿಲ ಸೇವೆ
ಹೆದರಬೇಡ ನೀನು
ಬಿದ್ದೀತು ಈ ಜೈಲು
ಪ್ರವಾಹದಲಿ ಕೊಚ್ಚಿ ಹೋದೀತು ಇದರ ಒಂದೊಂದೆ ಕಲ್ಲು.
ಬೇಸರವೆ ನಿನಗೆ? ನನಗೂ ಹಾಗೆ.
ಆಯ್ತು ನಿನಗಷ್ಟು ಬೇಕಿದ್ದರೆ
ತೆರೆ ಕದ
ಈಗ ಬಂದೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...