ಸಮರ್ಥನೆ : ಗಂಡ

ನಿನ್ನ ದಮ್ಮಯ್ಯ
ತಪ್ಪು ತಿಳಿಕೋಬೇಡ ನನ್ನ
ತಿಂದದ್ದೆ ತಿಂದು ಜಗಿದದ್ದೆ ಜಗಿದು
ಬರುತಿದೆ ನನಗೆ ವಾಕರಿಕೆ ಅಷ್ಟೆ
ತಿಳಿಸಾರು, ಹುಳಿ ಸಾಂಬಾರು, ಹುರಿದ ಮೀನು
ಅನ್ನ ಮೊಸರು – ನಾ ಹುಟ್ಟಿದಂದಿನಿಂದ ಮುಕ್ಕಿದ್ದು.
ಬದುಕಬೇಕಲ್ಲ ಎಂದು
ನುಂಗುತಿದ್ದೇನೆ – ಒಗ್ಗರಣೆ ಹಾಕಿದರು
ನನಗೆ ರುಚಿಯಿಲ್ಲ.
ಹಾಗೆ ಬೇಕಾದರೆ
ನಮ್ಮ ಮದುವೆಗೆ ಮೊದಲೆ
ಇಲ್ಲಿ ಕೆಲಸಕ್ಕಿದ್ದ
ಪಾರು ಕುಟ್ಟಿಯ ಟಗರು ಮರಿಗಳಂತಹ ನಾಲ್ಕು
ಗಂಡು ಮಕ್ಕಳ ಸಾಕ್ಷಿ
ಒಂದು ಕಾಲಕ್ಕೆ
ರಾತ್ರಿಯೊಂದರಲಿ ನಾಲ್ಕು ಚದುರೆಯರೊಡನೆ
ಚದುರಂಗವಾಡಿ ಗೆದ್ದವನು ನಾನು
ಹೆಚ್ಚೇಕೆ?
ಮೊದಲ ರಾತ್ರಿ ಗುಟುರು ಹಾಕಿ ನಾ
ಹೋರಿ ಬಂದಾಗ
ಹ್ಹಾ ಎಂದು ನೀನೆ
ತೆವಳಲಿಲ್ಲವೆ?
ಮನಸ್ಸಿಗೇನೋ ಬೇಕು
ಮಾಂಸ ದುರ್ಬಲ ನೋಡು.
ಬೆಕ್ಕಿಗಿಕ್ಕಿದ ಹಾಗೆ ಇಕ್ಕಿದರೆ ನಿನಗೆ
ಸಾಕಾಗುವುದಿಲ್ಲ ಭಾರಿ ಹೊಟ್ಟೆ ಬಾಕಿ!
ಈಗ ಗೊತ್ತಾಯ್ತೆ
ಜೋಲು ಮೊಲೆಗಳ ಮುದುಕ
ಸುಕ್ಕು ಮೋರೆಯ ಮುದುಕಿ
ಗುಟ್ಟು ಮಾತಿನಲಿ ನಡೆಸಿದ ಮಸಲತ್ತು?
ಗಲ್ಲಿಯಲೊ ಓಣಿಯಲೊ
ಬೇಕಾದಲ್ಲಿ ಸುತ್ತಿ
ಕದ್ದೊ, ಕೇಳಿಯೊ, ಪಡೆದೊ ತಿನ್ನಬಹುದಾದ
ಹುಟ್ಟುಸ್ವಾತಂತ್ರ್ಯಕ್ಕೆ ಹಾಕಿದರು ಸಂಕೋಲೆ.
ನೀನು ಬಯಸಿದ್ದಲ್ಲ
ನಾನು ಕೇಳಿದ್ದಲ್ಲ
ಯಾರ ಉದ್ಧಾರಕ್ಕೆ ಈ ಯಜ್ಞ?
ನಿನಗೆ ತಿಳಿದರಿಲಿಲ್ಲ ಮೊದಲೆ
ನನಗೆ ಸಂಶಯವಿತ್ತು
ಆದರೂ ನನ್ನ ಸೊಂಟದ ಸುತ್ತ
ಹಣಿಕಿ ಹಾಕುವ ಕುತೂಹಲ ನಿನಗೆ
ನನಗೊ ಕಲ್ಲು ತಪ್ಪಿಸಿಕೊಂಡು ಓಡಿ ಸಾಕಾಗಿ
ಕೊನೆಗೆ ನನ್ನದೇ ಒಂದು ಹೆಂಡತಿ ಇರಲಿ – ಎಂದು
– ಅಂತು ಹೀಗೆ
ಒಂದೆ ತಾಳಿಯಲಿ ಇಬ್ಬರಿಗೆ ಗಾಳ.
ನಮ್ಮ ಜೈಲಿನ ಒಳಗೆ ನಾವು ಕುಳಿತಿರುವುದಕೆ
ಇದು ಲೀಗಲ್ ಪರ್ಮಿಟು
ಈ ಜೈಲು ನನ್ನ ನಿನ್ನ
ಮುತ್ತಜ್ಜರ ಸೇನೆ ಕಲ್ಲು ಹೊತ್ತು ಕಟ್ಟಿದ್ದು
ನಮ್ಮದೂ ಸಂದಿದೆ ಇದಕೆ ಅಳಿಲ ಸೇವೆ
ಹೆದರಬೇಡ ನೀನು
ಬಿದ್ದೀತು ಈ ಜೈಲು
ಪ್ರವಾಹದಲಿ ಕೊಚ್ಚಿ ಹೋದೀತು ಇದರ ಒಂದೊಂದೆ ಕಲ್ಲು.
ಬೇಸರವೆ ನಿನಗೆ? ನನಗೂ ಹಾಗೆ.
ಆಯ್ತು ನಿನಗಷ್ಟು ಬೇಕಿದ್ದರೆ
ತೆರೆ ಕದ
ಈಗ ಬಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಂದ್ಯ
Next post ಯಾರ ಹಂಗೂ ಇಲ್ಲದೇ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys