Home / ಕವನ / ಕವಿತೆ / ತಪೋಭೂಮಿ – ಭಾರತ ವರ್ಷ

ತಪೋಭೂಮಿ – ಭಾರತ ವರ್ಷ

ಧನ್ಯಭೂಮೀ-
ಮಾನ್ಯರೂಪೀ, ಕನ್ಯೆಭಾರತಿ ಪುಣ್ಯೆಯೇ!
ಏಸುಕಾಲದಿ
ಮಾಸದಳಿಯದೆ ಕೋಶಸಲಹಿದೆ-ತಾಯಿಯೆ?

ಆರ್ಯಮೊಗಲರ
ವೀರ್ಯತೇಜರ ಶೌರ್ಯದಿಂದಲಿ ಸಲಹಿದೆ-
ರಾಶಿಜನಗಣ
ಆಶ್ರಯಾ ನಿನ್ನ ಲೇಸು ಪಡೆದರು-ಅಲ್ಲವೇ?

ನೆನೆವೆ ಅಂದಿನ
ಮುನಿಜನ ಮನ, ನಿನ್ನ ವೈಭವ-ವೈಭವ!
ವೇದ ಭೂಮಿಯು-
ಬೋಧದಾಶ್ರಮ-ವಿದುಷಿ ನೀನೇ ಸ್ಫೂರ್ತಿಯು!

ಕರ್ಮಭೂಮೀ
ಧರ್ಮಯಾತ್ರಾ ಮರ್ಮದಿಂದಲಿ ಮಾಡಿದೆ
ಗೀತೆ ಭಾರತ
ಮಾತೆ ವೇದದ ಜಾತೆ ನೀನೇ-ಭಾರತೇ!

ನೆನೆವೆ ಬುದ್ಧನ
ಧಣಿದಶೋಕನ, ಮಣಿವೆ ಸಾವಿರ ಮಾಽತ್ಮಗೆ
ತಪೋಭೂಮಿ
ರೂಪುಗೊಳಿಸು ಶಪಿಸಿದಿಂದಿನ ಸ್ಥಿತಿಯನು!

ಆ ರಾಮ ಕೃಷ್ಣರ
ಶೂರ ಗಾಂಧಿಯ ಪರಮ ಹಂಸರ ಕಂಡೆನೊ;
ಅಮಿತ ದೇಶಾ-
ಭಿಮಾನ ವಾದವ ಸಾಮವಾದದಿ ತೋರಿಸಿ.

ಇಂದು ನಾಳೆಯು
ಮುಂದು ಮುಂದಕು ಸಂದಾಹಿಂಸಾ ರೂಪವ
ಸತ್ಯ ಧರ್ಮದ
ಕೇತು ಹಾರಿಸಿ, ನರ್ತಿಸು-ಎಲೊ ಭಾರತಿ!

ಸ್ಥೈರ್ಯ ಧೈರ್ಯವು
ಸೂರ್ಯಕಾಂತಿಯ ಬೀರ್ಯಮೀರುತ ಬೆಳಗಲಿ,
ಅಮರ ಲೋಕದ
ಸಾಮಗಾನವ ಧರ್ಮರೂಪಿಣಿ-ಹಾಡೆಲೊ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...