ತಪೋಭೂಮಿ – ಭಾರತ ವರ್ಷ

ಧನ್ಯಭೂಮೀ-
ಮಾನ್ಯರೂಪೀ, ಕನ್ಯೆಭಾರತಿ ಪುಣ್ಯೆಯೇ!
ಏಸುಕಾಲದಿ
ಮಾಸದಳಿಯದೆ ಕೋಶಸಲಹಿದೆ-ತಾಯಿಯೆ?

ಆರ್ಯಮೊಗಲರ
ವೀರ್ಯತೇಜರ ಶೌರ್ಯದಿಂದಲಿ ಸಲಹಿದೆ-
ರಾಶಿಜನಗಣ
ಆಶ್ರಯಾ ನಿನ್ನ ಲೇಸು ಪಡೆದರು-ಅಲ್ಲವೇ?

ನೆನೆವೆ ಅಂದಿನ
ಮುನಿಜನ ಮನ, ನಿನ್ನ ವೈಭವ-ವೈಭವ!
ವೇದ ಭೂಮಿಯು-
ಬೋಧದಾಶ್ರಮ-ವಿದುಷಿ ನೀನೇ ಸ್ಫೂರ್ತಿಯು!

ಕರ್ಮಭೂಮೀ
ಧರ್ಮಯಾತ್ರಾ ಮರ್ಮದಿಂದಲಿ ಮಾಡಿದೆ
ಗೀತೆ ಭಾರತ
ಮಾತೆ ವೇದದ ಜಾತೆ ನೀನೇ-ಭಾರತೇ!

ನೆನೆವೆ ಬುದ್ಧನ
ಧಣಿದಶೋಕನ, ಮಣಿವೆ ಸಾವಿರ ಮಾಽತ್ಮಗೆ
ತಪೋಭೂಮಿ
ರೂಪುಗೊಳಿಸು ಶಪಿಸಿದಿಂದಿನ ಸ್ಥಿತಿಯನು!

ಆ ರಾಮ ಕೃಷ್ಣರ
ಶೂರ ಗಾಂಧಿಯ ಪರಮ ಹಂಸರ ಕಂಡೆನೊ;
ಅಮಿತ ದೇಶಾ-
ಭಿಮಾನ ವಾದವ ಸಾಮವಾದದಿ ತೋರಿಸಿ.

ಇಂದು ನಾಳೆಯು
ಮುಂದು ಮುಂದಕು ಸಂದಾಹಿಂಸಾ ರೂಪವ
ಸತ್ಯ ಧರ್ಮದ
ಕೇತು ಹಾರಿಸಿ, ನರ್ತಿಸು-ಎಲೊ ಭಾರತಿ!

ಸ್ಥೈರ್ಯ ಧೈರ್ಯವು
ಸೂರ್ಯಕಾಂತಿಯ ಬೀರ್ಯಮೀರುತ ಬೆಳಗಲಿ,
ಅಮರ ಲೋಕದ
ಸಾಮಗಾನವ ಧರ್ಮರೂಪಿಣಿ-ಹಾಡೆಲೊ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೫
Next post ಉಸಿರಿನ ಹಡಗು

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys