Home / ಕವನ / ಕವಿತೆ / ಕೇರಳ

ಕೇರಳ

ಹದಿನಾರಕೆ
ಈಗತಾನೆ ಐನೀರು ಮುಳುಗಿ ಬಂದವಳು
ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ
ಶಕುಂತಳೆ
ಇದು ವಿಶ್ವಾಮಿತ್ರ ಸೃಷ್ಟಿ
ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ.
ಈ ಪ್ರಮೀಳೆ ಯಾರಾರ ಹೃದಯಕ್ಕೆ
ಹಚ್ಚುವಳೊ ಬೆಂಕಿ!
ಆರಿಸುವ
ಲಾಲಿಸುವ ತೋಳ ತೆರೆಮಾಲೆ
ಕುಡಿಮೊಲೆಯ ಕ್ಷೀರ ನಿಕ್ಷೇಪ
ಹೊತ್ತು ತಲೆಬಾಗಿಸಿದ ಕಲ್ಪವೃಕ್ಷ

ಛೀ ಸಾಕು
ಈ ಹುಚ್ಚು
ಇದು ಸೆಕೆಂಡ್ ಹ್ಯಾಂಡ್ ಕಾವ್ಯ
ಯಾರ ಟೇಸ್ಟಿಗೋ ಮಾಡಿದ ಅಡಿಗೆ ಇದು
ಪಂಪ, ಕುಮಾರವ್ಯಾಸ, ಮಿಲ್ಟನರ
ಕಿಸೆಗೆ ಕೈಹಾಕಿ
ಪದ ವಿಜೃಂಭಣೆಯ ಅಮಲಿನಲ್ಲಿ
ನಾನು ರಾಮಾಯಣ ಬರೆಯಲೊಲ್ಲೆ
ನನ್ನ ದರ್ಶನ ಬೇರೆ
ಕೊಂಡೆ ಕೊಳ್ಳಗಳಲ್ಲಿ ಗಲ್ಲಿಗಳಲ್ಲಿ
ಕಂಡ, ಅರಗಿಸಿಕೊಂಡ,
ಮರೆತೇ ಹೋದ ಸಂಕೀರ್ಣ
ಅನುಭವದ ವಿಸ್ಕಿ, ಅದು
ಇಲ್ಲಿ ವಿಶ್ವಾಮಿತ್ರನೂ
ನಾಯಿಯ ಮಾಂಸ ತಿಂದು ತೇಗಿದ್ದ
ಇದಕ್ಕೆ ನೂರೆಂಟು ಪ್ರಾಕಾರಗಳು
ಈಕೆಗೆ ಹದಿನಾರೆಂಬ ಛಲವೇಕೆ?
ಕಾಲದ ಪರೆ ತೆರೆದರೆ
ಒಳಗೆ ಮಸಿ ಹಿಡಿದ ಪೆಟ್ಟಿಕ್ಕೋಟು
ಅಗ್ಗ ಪೌಡರಿನಲ್ಲಿ ಬೆವರಿನ ಕಮಟು
ಹೆಲೆನಳ ಚರ್ಮದಲ್ಲೂ ಗ್ರೀಸಿನ ಜಾರು
ಈ ವಿಕೃತ ಮುಖಗಳ ವ್ಯಕ್ತಿ
ಇರಬಹುದು ನಾನು ನೀನು

ನನ್ನ ಹಾಡೇ ಬೇರೆ
ತಾಳಲಯ ವ್ಯಾಕರಣ ಸಿಂಟ್ಯಾಕ್ಸು ಎಲ್ಲ
ಒಡೆದು
ನೋವು ನಗೆ ಜಿಗುಪ್ಸೆ ವ್ಯಂಗ್ಯ
ತಿಳಿದ ತಿಳಿಯದ ಸುಪ್ತ ಜಾಗೃತ ಭಾವಗಳ
ಅಕ್ರೊಬಾಟಿಕ್ಸ್
ಏನೋ ಹೇಳಬೇಕು
ಏನೆಂಬುದು ಮಬ್ಬಿ
ಹೇಗೋ ಹೇಳಬೇಕು
ಹೇಗೆಂಬುದು ಅಸ್ಪಷ್ಟ
ಅತೃಪ್ತಿಯ ಉಗ್ಗು
ಕಳಚಿ ಬೀಳುವ ಇಂದ್ರಿಯ ಪ್ರಜ್ಞೆಗಳಿಗೆ ಜೋತು
ನನ್ನ ಪ್ಯಾಟರ್ನ್ ಕಂಡು ಹುಡುಕುವ
ಪ್ರಯತ್ನ ಇದು
ಈ ಸಂಕೀರ್ಣತೆಯ ಅಕ್ಷಯ ಜಿಡ್ಡುದಾರ ಮೈಬಿಗಿದು
ಅನುಭವವಾಗಿ, ಅದು ನಾನಾಗಿ
ನಾನೆ ಅಭಿವ್ಯಕ್ತಿಯಾದಾಗ
ಅದೇನು ನಾನೇ ನನ್ನ ಕಾವ್ಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...