ಕೇರಳ

ಹದಿನಾರಕೆ
ಈಗತಾನೆ ಐನೀರು ಮುಳುಗಿ ಬಂದವಳು
ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ
ಶಕುಂತಳೆ
ಇದು ವಿಶ್ವಾಮಿತ್ರ ಸೃಷ್ಟಿ
ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ.
ಈ ಪ್ರಮೀಳೆ ಯಾರಾರ ಹೃದಯಕ್ಕೆ
ಹಚ್ಚುವಳೊ ಬೆಂಕಿ!
ಆರಿಸುವ
ಲಾಲಿಸುವ ತೋಳ ತೆರೆಮಾಲೆ
ಕುಡಿಮೊಲೆಯ ಕ್ಷೀರ ನಿಕ್ಷೇಪ
ಹೊತ್ತು ತಲೆಬಾಗಿಸಿದ ಕಲ್ಪವೃಕ್ಷ

ಛೀ ಸಾಕು
ಈ ಹುಚ್ಚು
ಇದು ಸೆಕೆಂಡ್ ಹ್ಯಾಂಡ್ ಕಾವ್ಯ
ಯಾರ ಟೇಸ್ಟಿಗೋ ಮಾಡಿದ ಅಡಿಗೆ ಇದು
ಪಂಪ, ಕುಮಾರವ್ಯಾಸ, ಮಿಲ್ಟನರ
ಕಿಸೆಗೆ ಕೈಹಾಕಿ
ಪದ ವಿಜೃಂಭಣೆಯ ಅಮಲಿನಲ್ಲಿ
ನಾನು ರಾಮಾಯಣ ಬರೆಯಲೊಲ್ಲೆ
ನನ್ನ ದರ್ಶನ ಬೇರೆ
ಕೊಂಡೆ ಕೊಳ್ಳಗಳಲ್ಲಿ ಗಲ್ಲಿಗಳಲ್ಲಿ
ಕಂಡ, ಅರಗಿಸಿಕೊಂಡ,
ಮರೆತೇ ಹೋದ ಸಂಕೀರ್ಣ
ಅನುಭವದ ವಿಸ್ಕಿ, ಅದು
ಇಲ್ಲಿ ವಿಶ್ವಾಮಿತ್ರನೂ
ನಾಯಿಯ ಮಾಂಸ ತಿಂದು ತೇಗಿದ್ದ
ಇದಕ್ಕೆ ನೂರೆಂಟು ಪ್ರಾಕಾರಗಳು
ಈಕೆಗೆ ಹದಿನಾರೆಂಬ ಛಲವೇಕೆ?
ಕಾಲದ ಪರೆ ತೆರೆದರೆ
ಒಳಗೆ ಮಸಿ ಹಿಡಿದ ಪೆಟ್ಟಿಕ್ಕೋಟು
ಅಗ್ಗ ಪೌಡರಿನಲ್ಲಿ ಬೆವರಿನ ಕಮಟು
ಹೆಲೆನಳ ಚರ್ಮದಲ್ಲೂ ಗ್ರೀಸಿನ ಜಾರು
ಈ ವಿಕೃತ ಮುಖಗಳ ವ್ಯಕ್ತಿ
ಇರಬಹುದು ನಾನು ನೀನು

ನನ್ನ ಹಾಡೇ ಬೇರೆ
ತಾಳಲಯ ವ್ಯಾಕರಣ ಸಿಂಟ್ಯಾಕ್ಸು ಎಲ್ಲ
ಒಡೆದು
ನೋವು ನಗೆ ಜಿಗುಪ್ಸೆ ವ್ಯಂಗ್ಯ
ತಿಳಿದ ತಿಳಿಯದ ಸುಪ್ತ ಜಾಗೃತ ಭಾವಗಳ
ಅಕ್ರೊಬಾಟಿಕ್ಸ್
ಏನೋ ಹೇಳಬೇಕು
ಏನೆಂಬುದು ಮಬ್ಬಿ
ಹೇಗೋ ಹೇಳಬೇಕು
ಹೇಗೆಂಬುದು ಅಸ್ಪಷ್ಟ
ಅತೃಪ್ತಿಯ ಉಗ್ಗು
ಕಳಚಿ ಬೀಳುವ ಇಂದ್ರಿಯ ಪ್ರಜ್ಞೆಗಳಿಗೆ ಜೋತು
ನನ್ನ ಪ್ಯಾಟರ್ನ್ ಕಂಡು ಹುಡುಕುವ
ಪ್ರಯತ್ನ ಇದು
ಈ ಸಂಕೀರ್ಣತೆಯ ಅಕ್ಷಯ ಜಿಡ್ಡುದಾರ ಮೈಬಿಗಿದು
ಅನುಭವವಾಗಿ, ಅದು ನಾನಾಗಿ
ನಾನೆ ಅಭಿವ್ಯಕ್ತಿಯಾದಾಗ
ಅದೇನು ನಾನೇ ನನ್ನ ಕಾವ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇವ ಅವನಲ್ಲ
Next post ಬಯಕೆ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys