Home / ಕವನ / ಕವಿತೆ / ಕೇರಳ

ಕೇರಳ

ಹದಿನಾರಕೆ
ಈಗತಾನೆ ಐನೀರು ಮುಳುಗಿ ಬಂದವಳು
ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ
ಶಕುಂತಳೆ
ಇದು ವಿಶ್ವಾಮಿತ್ರ ಸೃಷ್ಟಿ
ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ.
ಈ ಪ್ರಮೀಳೆ ಯಾರಾರ ಹೃದಯಕ್ಕೆ
ಹಚ್ಚುವಳೊ ಬೆಂಕಿ!
ಆರಿಸುವ
ಲಾಲಿಸುವ ತೋಳ ತೆರೆಮಾಲೆ
ಕುಡಿಮೊಲೆಯ ಕ್ಷೀರ ನಿಕ್ಷೇಪ
ಹೊತ್ತು ತಲೆಬಾಗಿಸಿದ ಕಲ್ಪವೃಕ್ಷ

ಛೀ ಸಾಕು
ಈ ಹುಚ್ಚು
ಇದು ಸೆಕೆಂಡ್ ಹ್ಯಾಂಡ್ ಕಾವ್ಯ
ಯಾರ ಟೇಸ್ಟಿಗೋ ಮಾಡಿದ ಅಡಿಗೆ ಇದು
ಪಂಪ, ಕುಮಾರವ್ಯಾಸ, ಮಿಲ್ಟನರ
ಕಿಸೆಗೆ ಕೈಹಾಕಿ
ಪದ ವಿಜೃಂಭಣೆಯ ಅಮಲಿನಲ್ಲಿ
ನಾನು ರಾಮಾಯಣ ಬರೆಯಲೊಲ್ಲೆ
ನನ್ನ ದರ್ಶನ ಬೇರೆ
ಕೊಂಡೆ ಕೊಳ್ಳಗಳಲ್ಲಿ ಗಲ್ಲಿಗಳಲ್ಲಿ
ಕಂಡ, ಅರಗಿಸಿಕೊಂಡ,
ಮರೆತೇ ಹೋದ ಸಂಕೀರ್ಣ
ಅನುಭವದ ವಿಸ್ಕಿ, ಅದು
ಇಲ್ಲಿ ವಿಶ್ವಾಮಿತ್ರನೂ
ನಾಯಿಯ ಮಾಂಸ ತಿಂದು ತೇಗಿದ್ದ
ಇದಕ್ಕೆ ನೂರೆಂಟು ಪ್ರಾಕಾರಗಳು
ಈಕೆಗೆ ಹದಿನಾರೆಂಬ ಛಲವೇಕೆ?
ಕಾಲದ ಪರೆ ತೆರೆದರೆ
ಒಳಗೆ ಮಸಿ ಹಿಡಿದ ಪೆಟ್ಟಿಕ್ಕೋಟು
ಅಗ್ಗ ಪೌಡರಿನಲ್ಲಿ ಬೆವರಿನ ಕಮಟು
ಹೆಲೆನಳ ಚರ್ಮದಲ್ಲೂ ಗ್ರೀಸಿನ ಜಾರು
ಈ ವಿಕೃತ ಮುಖಗಳ ವ್ಯಕ್ತಿ
ಇರಬಹುದು ನಾನು ನೀನು

ನನ್ನ ಹಾಡೇ ಬೇರೆ
ತಾಳಲಯ ವ್ಯಾಕರಣ ಸಿಂಟ್ಯಾಕ್ಸು ಎಲ್ಲ
ಒಡೆದು
ನೋವು ನಗೆ ಜಿಗುಪ್ಸೆ ವ್ಯಂಗ್ಯ
ತಿಳಿದ ತಿಳಿಯದ ಸುಪ್ತ ಜಾಗೃತ ಭಾವಗಳ
ಅಕ್ರೊಬಾಟಿಕ್ಸ್
ಏನೋ ಹೇಳಬೇಕು
ಏನೆಂಬುದು ಮಬ್ಬಿ
ಹೇಗೋ ಹೇಳಬೇಕು
ಹೇಗೆಂಬುದು ಅಸ್ಪಷ್ಟ
ಅತೃಪ್ತಿಯ ಉಗ್ಗು
ಕಳಚಿ ಬೀಳುವ ಇಂದ್ರಿಯ ಪ್ರಜ್ಞೆಗಳಿಗೆ ಜೋತು
ನನ್ನ ಪ್ಯಾಟರ್ನ್ ಕಂಡು ಹುಡುಕುವ
ಪ್ರಯತ್ನ ಇದು
ಈ ಸಂಕೀರ್ಣತೆಯ ಅಕ್ಷಯ ಜಿಡ್ಡುದಾರ ಮೈಬಿಗಿದು
ಅನುಭವವಾಗಿ, ಅದು ನಾನಾಗಿ
ನಾನೆ ಅಭಿವ್ಯಕ್ತಿಯಾದಾಗ
ಅದೇನು ನಾನೇ ನನ್ನ ಕಾವ್ಯ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...