Home / ಕವನ / ಕವಿತೆ / ಮುಖಗಳು

ಮುಖಗಳು

ಬೆಳಕಿನ ಮುಖಗಳಿವೆ
ಮಣ್ಣಿನ ಮುಖಗಳಿವೆ
ಇವೆರಡರ ನಡುವೆಯೊಂದು
ದಾರಿ ಹುಡುಕುತ್ತೇನೆ:
ಮನುಷ್ಯರ ಮುಖಗಳತ್ತ
ಕೊಂಡೊಯ್ಯುವ ದಾರಿ

ಮುಖವಿಲ್ಲದವನು ನಾನು.

ನಿನ್ನ ಮುಖ ನನ್ನದು
ಅವನದೂ ನನ್ನದೇ
ಅವಳದೂ ಹೌದು.
ಕೆಲವೊಮ್ಮೆ ಮಂದಿಯ ಮುಂದೆ ಬಂದಾಗ
ನನ್ನ ಸ್ವರೂಪವೇ ಬಿಂಬಿಸಿದಂತೆ
ಅನಿಸುತ್ತದೆ.
ಮತ್ತು ಈ ಬೃಹತ್ ಕೋಣೆಯಲಿ ನನ್ನ ಸ್ವಗತವೇ
ಧ್ವನಿಯಾಗಿ ಪ್ರತಿಧ್ವನಿಯಾಗಿ
ತಮ್ಮಟೆ ಬಾರಿಸುತ್ತದೆ ನಿರಂತರ.
ಇಷ್ಟೆ ಅಲ್ಲ.
ಈಡಿಪಸ್, ನೀರೊ, ಶಾಜಹಾನ್
ಹೀಗೆ ಸೀರೆನಿರಿಯಂತೆ
ಅಕ್ಷಯ ಅವತಾರಿಯಾಗಿ
ಕೊರೆದಿದ್ದೇನೆ ಚರಿತ್ರೆಯಲಿ
ನನ್ನ ಮುಖಗಳ ಏರುತಗ್ಗು.
ಆಕಾರಕ್ಕೆ ಬಾರದೆ
ನೆರಳಾಗಿ, ನೆರಳೂ ಅಲ್ಲದಾಗಿ
ಅಗೋಚರವಾಗಿ
ಯಾರಿಗೂ ಏನೂ ಅಲ್ಲದೆ
ತೊಟ್ಟು ಕಳಚಿ
ಆಕಾಶದಲ್ಲಿ ತ್ರಿಶಂಕುವಾಗಿ
ತೊನೆಯುತ್ತಿರುವ,
ಇರವಿನರಿವಿಲ್ಲದೆ, ಇರವೂ ಇಲ್ಲದೆ,
ಬದುಕಿ ಸತ್ತಿರುವ
ಸತ್ತು ಬದುಕಿರುವ
ಸಾವು ಬದುಕಿನ ಮಧ್ಯೆ ಪ್ರೇತಾತ್ಮವಾಗಿರುವ
ಆತ್ಮವೇ ಇಲ್ಲದ ಹಲವು ಸಾವಿರ
ಮುಖಗಳೂ ಇವೆ ನನಗೆ.
ಇವೆಲ್ಲವನು ಹೊತ್ತು
ಈಜಿಪ್ತದ ಸ್ಫಿಂಕ್ಸೆನ ಹಾಗೆ
ಭೂತದಿಂದ ಭವಿಷ್ಯತ್ತಿನ ಕಡೆಗೆ
ನಾನು ಮುಂದೊತ್ತಿ ಬರುತ್ತಿದ್ದೇನೆ ಮೆಲ್ಲಗೆ
ಆದರೂ ನನಗೆ ಇವೆಲ್ಲವೂ ಮಸಕು
ಎಲ್ಲ ಮುಖಗಳಿಗೂ ಅಪರಿಚಿತ ಮುಸುಕು
ನಿನ್ನದೂ
ನನ್ನದೂ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...