ರಾಜಾಸನದ ಕಟ್ಟೆಯ ಮೇಗಲಿ

ಮಡಿಕೇರೀ ಮಲೆ ಸೃಷ್ಠಿಯ ಕೋಮಲೆ
ಸುತ್ತಲು ಗಿರಿಸಾಲು.
ಬಯಲಿನ ತಪ್ಪಲು ನಿರ್ಝರ ದರಿಗಳು
ನಿಡು ಮರ ಗಿಡ ಸಾಲು,
ಸೃಷ್ಠಿಯ ರಮ್ಯ ಸೌಂದರ್ಯಗಳು

ದೃಷ್ಠಿಯೆ ಬೀಳದ ಆಳದೊಳೆಲ್ಲಿಯು
ಹಚ್ಚನೆ ಹೊಲಸಾಲು
ಸುತ್ತು ದಿಗಂತವ ಅಪ್ಪುತ ನಿಂತಿಹ
ನುಣ್ಣನೆ ಬೆಟ್ಟಗಳು,
ಸುತ್ತಲು ಹಬ್ಬಿದ ಬನಹಸುರು.

ತಪ್ಪಲ ಸಾನುವಲಾಯ್ವವು ದನಗಳು
ಅಂಬಾ-ಅನ್ನುತಲಿ-
ಇನಿವಣ್ ಮೆಲುತಲಿ ಮಿಗಮರಿ ಗಿರಿಯಿಂ
ಪೊದರೊಳು ಸೇರಿದವು
ಸಂಜೆ ವಿಶ್ರಾಂತಿಯ ಹೊಂದುವವು.

ಪಡುವಣ ಮಾರುತದೊಂದಿಗೆ ಹಾರುವ
ಚಿಲಿಪಿಲಿ ಹಕ್ಕಿಗಳು
ಕಣಿವೆಯಿಂದೊಯ್ಯನೆ ಬೆಳೆದಾ ಮರಗಳ
ಗೂಡಿನಲೊರಗುವವು
ಪೀಂ ಪೀಂ ಹಾಡಿನ ತಾಳಗಳು.

ತಪ್ಪಲ ನಿರ್ಝರ ಸುಂದರ ಸುಮಕರ
ದೃಶ್ಯದ ರೂಪವದೊ-
ಕಾಳಾಹಿಯ ತೆರ ಬಳಸೋಡುವ ಹಲ
ರಸ್ತೆಗಳದೊ-ಓಟ
ಬತ್ತದ ತೆನೆಗಳ ಗೆಲು ನೋಟ!

ಪಶ್ಚಿಮ ವಾರಿಧಿ ಸ್ನಾನವನೆಸಗಲು
ರವಿಯದೊ ಇಳಿಯುವನು,
ಕೆಂಗದಿರುಗಳನು ಬಾನ್ ಬಯಲೆಲ್ಲ
ಪಸರಿಸಿ ಇಳಿಯುವನು
ಸಂಜೆಯ ಸೂರ್ಯನು ಮುಳುಗುವನು

ರಾಜಾಸನದಾ ಕಟ್ಟೆಯ ಮೇಗಲಿ-
ಕೇರಿಯ ತರುಣಿಯರು
ರಮ ರಮ ಝಿಮ ಜಿಮ ಸಂವಾದಗಳಾ
ಲೀಲೆಯೊಳ್ ಮುಳುಗಿದರು
ಮರೆತರು ಸುತ್ತಲ ಲೋಕವನು.

ಹಕ್ಕಿಗಳಾಡೂ ಚಂದಿರನುದಯವು
ಗುಂಯ್ ಗುಂಯ್ ತುಂಬಿಗಳಾ
ಚಂಚಲ ಕರೆಯಲಿ, ಕೇಳಿಯ ಮರುಳಲಿ,
ಮನೋಲ್ಲಾಸದಲಿ-
ಕಾಮನ ವಾರ್ತಾವಿಷಯದಲಿ.

ತೆಂಬೆಲರೊಯ್ಯನೆ ತಣ್ಣನೆ ಬೀಸಲು
ಕುಣಿದವು ಕುರುಳುಗಳು-
ಮೊಲೆಕಟ್ಟುಡುಪೂ ಹಿನ್ನಿರಿ ಕುಚ್ಚೂ
ಜರಿ ವಸ್ತ್ರ ತೊಟ್ಟು-
ಮಿನುಗಿತು ಕುಂಕುಮದಾ ಬೊಟ್ಟು.

ಚೆಣಿಕಣಿ ಬಳೆಗಳು ಝಲ್‌ಜಲ್ ನೂಪುರ
ರತ್ನದ ಒಂಟಿಸರ
ತೂಗುವ ಜುಂಕಿಗಳೋಲೆಯನಾಡಿಸಿ
ಕುಲುಕುವರಾ ತಲೆಯ-
ಎದೆ ಮೇಲಿರಿಸುವರಾ ಜಡೆಯ!

ಆಚಿಂದೀಚೆಗೆ ಸರಸದಲಾಡುತ
ಘಮಘಮ ಹೂಗಳನು-
ಕೋಲಿಂ ಬೀಳಿಸಿ ‘ತೇರೆ ಶಿವಾ’ಡುತ-
ಪೋಣಿಸಿದರು ಮಾಲೆ-
ಸಂಪಿಗೆ ಜಾಜಿಗಳೂಮಾಲೆ!

ಕೆಂಪದೊ ಬಾನೂ ಮುಗಿಲೋಳಿಗಳೂ
ವರಿಸುವೆನವನೆನುತ-
ತಂತಮ್ಮ ಕೊರಳೊಳು ಹಾಕುತಮಾಲೆಯ
ಕೈಪರೆಯಾಟದಲಿ-
ನಾಚುವರವರೇ ಗೇಲಿಯಲಿ.

ಸೂರ್ಯನ ಕಾಂತಿಯು ನೀಲಾಕಾಶದಿಂ-
ದೆಲ್ಲಿಯೊ ಹರಿದೋಯ್ತು!
ನಿರ್ಜನ ಭೂಮಿಯದಾಯಿತು-ಸರಿದರು
ಉಳೀಸುತ ಕತ್ತಲನು
ಅನುಭವಿಸುತಲೀ ಹರುಷವನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೬
Next post ಪಂಪನಿಗೆ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…