ರಾಜಾಸನದ ಕಟ್ಟೆಯ ಮೇಗಲಿ

ಮಡಿಕೇರೀ ಮಲೆ ಸೃಷ್ಠಿಯ ಕೋಮಲೆ
ಸುತ್ತಲು ಗಿರಿಸಾಲು.
ಬಯಲಿನ ತಪ್ಪಲು ನಿರ್ಝರ ದರಿಗಳು
ನಿಡು ಮರ ಗಿಡ ಸಾಲು,
ಸೃಷ್ಠಿಯ ರಮ್ಯ ಸೌಂದರ್ಯಗಳು

ದೃಷ್ಠಿಯೆ ಬೀಳದ ಆಳದೊಳೆಲ್ಲಿಯು
ಹಚ್ಚನೆ ಹೊಲಸಾಲು
ಸುತ್ತು ದಿಗಂತವ ಅಪ್ಪುತ ನಿಂತಿಹ
ನುಣ್ಣನೆ ಬೆಟ್ಟಗಳು,
ಸುತ್ತಲು ಹಬ್ಬಿದ ಬನಹಸುರು.

ತಪ್ಪಲ ಸಾನುವಲಾಯ್ವವು ದನಗಳು
ಅಂಬಾ-ಅನ್ನುತಲಿ-
ಇನಿವಣ್ ಮೆಲುತಲಿ ಮಿಗಮರಿ ಗಿರಿಯಿಂ
ಪೊದರೊಳು ಸೇರಿದವು
ಸಂಜೆ ವಿಶ್ರಾಂತಿಯ ಹೊಂದುವವು.

ಪಡುವಣ ಮಾರುತದೊಂದಿಗೆ ಹಾರುವ
ಚಿಲಿಪಿಲಿ ಹಕ್ಕಿಗಳು
ಕಣಿವೆಯಿಂದೊಯ್ಯನೆ ಬೆಳೆದಾ ಮರಗಳ
ಗೂಡಿನಲೊರಗುವವು
ಪೀಂ ಪೀಂ ಹಾಡಿನ ತಾಳಗಳು.

ತಪ್ಪಲ ನಿರ್ಝರ ಸುಂದರ ಸುಮಕರ
ದೃಶ್ಯದ ರೂಪವದೊ-
ಕಾಳಾಹಿಯ ತೆರ ಬಳಸೋಡುವ ಹಲ
ರಸ್ತೆಗಳದೊ-ಓಟ
ಬತ್ತದ ತೆನೆಗಳ ಗೆಲು ನೋಟ!

ಪಶ್ಚಿಮ ವಾರಿಧಿ ಸ್ನಾನವನೆಸಗಲು
ರವಿಯದೊ ಇಳಿಯುವನು,
ಕೆಂಗದಿರುಗಳನು ಬಾನ್ ಬಯಲೆಲ್ಲ
ಪಸರಿಸಿ ಇಳಿಯುವನು
ಸಂಜೆಯ ಸೂರ್ಯನು ಮುಳುಗುವನು

ರಾಜಾಸನದಾ ಕಟ್ಟೆಯ ಮೇಗಲಿ-
ಕೇರಿಯ ತರುಣಿಯರು
ರಮ ರಮ ಝಿಮ ಜಿಮ ಸಂವಾದಗಳಾ
ಲೀಲೆಯೊಳ್ ಮುಳುಗಿದರು
ಮರೆತರು ಸುತ್ತಲ ಲೋಕವನು.

ಹಕ್ಕಿಗಳಾಡೂ ಚಂದಿರನುದಯವು
ಗುಂಯ್ ಗುಂಯ್ ತುಂಬಿಗಳಾ
ಚಂಚಲ ಕರೆಯಲಿ, ಕೇಳಿಯ ಮರುಳಲಿ,
ಮನೋಲ್ಲಾಸದಲಿ-
ಕಾಮನ ವಾರ್ತಾವಿಷಯದಲಿ.

ತೆಂಬೆಲರೊಯ್ಯನೆ ತಣ್ಣನೆ ಬೀಸಲು
ಕುಣಿದವು ಕುರುಳುಗಳು-
ಮೊಲೆಕಟ್ಟುಡುಪೂ ಹಿನ್ನಿರಿ ಕುಚ್ಚೂ
ಜರಿ ವಸ್ತ್ರ ತೊಟ್ಟು-
ಮಿನುಗಿತು ಕುಂಕುಮದಾ ಬೊಟ್ಟು.

ಚೆಣಿಕಣಿ ಬಳೆಗಳು ಝಲ್‌ಜಲ್ ನೂಪುರ
ರತ್ನದ ಒಂಟಿಸರ
ತೂಗುವ ಜುಂಕಿಗಳೋಲೆಯನಾಡಿಸಿ
ಕುಲುಕುವರಾ ತಲೆಯ-
ಎದೆ ಮೇಲಿರಿಸುವರಾ ಜಡೆಯ!

ಆಚಿಂದೀಚೆಗೆ ಸರಸದಲಾಡುತ
ಘಮಘಮ ಹೂಗಳನು-
ಕೋಲಿಂ ಬೀಳಿಸಿ ‘ತೇರೆ ಶಿವಾ’ಡುತ-
ಪೋಣಿಸಿದರು ಮಾಲೆ-
ಸಂಪಿಗೆ ಜಾಜಿಗಳೂಮಾಲೆ!

ಕೆಂಪದೊ ಬಾನೂ ಮುಗಿಲೋಳಿಗಳೂ
ವರಿಸುವೆನವನೆನುತ-
ತಂತಮ್ಮ ಕೊರಳೊಳು ಹಾಕುತಮಾಲೆಯ
ಕೈಪರೆಯಾಟದಲಿ-
ನಾಚುವರವರೇ ಗೇಲಿಯಲಿ.

ಸೂರ್ಯನ ಕಾಂತಿಯು ನೀಲಾಕಾಶದಿಂ-
ದೆಲ್ಲಿಯೊ ಹರಿದೋಯ್ತು!
ನಿರ್ಜನ ಭೂಮಿಯದಾಯಿತು-ಸರಿದರು
ಉಳೀಸುತ ಕತ್ತಲನು
ಅನುಭವಿಸುತಲೀ ಹರುಷವನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨೬
Next post ಪಂಪನಿಗೆ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys