Home / ಕವನ / ಕವಿತೆ / ರಾಜಾಸನದ ಕಟ್ಟೆಯ ಮೇಗಲಿ

ರಾಜಾಸನದ ಕಟ್ಟೆಯ ಮೇಗಲಿ

ಮಡಿಕೇರೀ ಮಲೆ ಸೃಷ್ಠಿಯ ಕೋಮಲೆ
ಸುತ್ತಲು ಗಿರಿಸಾಲು.
ಬಯಲಿನ ತಪ್ಪಲು ನಿರ್ಝರ ದರಿಗಳು
ನಿಡು ಮರ ಗಿಡ ಸಾಲು,
ಸೃಷ್ಠಿಯ ರಮ್ಯ ಸೌಂದರ್ಯಗಳು

ದೃಷ್ಠಿಯೆ ಬೀಳದ ಆಳದೊಳೆಲ್ಲಿಯು
ಹಚ್ಚನೆ ಹೊಲಸಾಲು
ಸುತ್ತು ದಿಗಂತವ ಅಪ್ಪುತ ನಿಂತಿಹ
ನುಣ್ಣನೆ ಬೆಟ್ಟಗಳು,
ಸುತ್ತಲು ಹಬ್ಬಿದ ಬನಹಸುರು.

ತಪ್ಪಲ ಸಾನುವಲಾಯ್ವವು ದನಗಳು
ಅಂಬಾ-ಅನ್ನುತಲಿ-
ಇನಿವಣ್ ಮೆಲುತಲಿ ಮಿಗಮರಿ ಗಿರಿಯಿಂ
ಪೊದರೊಳು ಸೇರಿದವು
ಸಂಜೆ ವಿಶ್ರಾಂತಿಯ ಹೊಂದುವವು.

ಪಡುವಣ ಮಾರುತದೊಂದಿಗೆ ಹಾರುವ
ಚಿಲಿಪಿಲಿ ಹಕ್ಕಿಗಳು
ಕಣಿವೆಯಿಂದೊಯ್ಯನೆ ಬೆಳೆದಾ ಮರಗಳ
ಗೂಡಿನಲೊರಗುವವು
ಪೀಂ ಪೀಂ ಹಾಡಿನ ತಾಳಗಳು.

ತಪ್ಪಲ ನಿರ್ಝರ ಸುಂದರ ಸುಮಕರ
ದೃಶ್ಯದ ರೂಪವದೊ-
ಕಾಳಾಹಿಯ ತೆರ ಬಳಸೋಡುವ ಹಲ
ರಸ್ತೆಗಳದೊ-ಓಟ
ಬತ್ತದ ತೆನೆಗಳ ಗೆಲು ನೋಟ!

ಪಶ್ಚಿಮ ವಾರಿಧಿ ಸ್ನಾನವನೆಸಗಲು
ರವಿಯದೊ ಇಳಿಯುವನು,
ಕೆಂಗದಿರುಗಳನು ಬಾನ್ ಬಯಲೆಲ್ಲ
ಪಸರಿಸಿ ಇಳಿಯುವನು
ಸಂಜೆಯ ಸೂರ್ಯನು ಮುಳುಗುವನು

ರಾಜಾಸನದಾ ಕಟ್ಟೆಯ ಮೇಗಲಿ-
ಕೇರಿಯ ತರುಣಿಯರು
ರಮ ರಮ ಝಿಮ ಜಿಮ ಸಂವಾದಗಳಾ
ಲೀಲೆಯೊಳ್ ಮುಳುಗಿದರು
ಮರೆತರು ಸುತ್ತಲ ಲೋಕವನು.

ಹಕ್ಕಿಗಳಾಡೂ ಚಂದಿರನುದಯವು
ಗುಂಯ್ ಗುಂಯ್ ತುಂಬಿಗಳಾ
ಚಂಚಲ ಕರೆಯಲಿ, ಕೇಳಿಯ ಮರುಳಲಿ,
ಮನೋಲ್ಲಾಸದಲಿ-
ಕಾಮನ ವಾರ್ತಾವಿಷಯದಲಿ.

ತೆಂಬೆಲರೊಯ್ಯನೆ ತಣ್ಣನೆ ಬೀಸಲು
ಕುಣಿದವು ಕುರುಳುಗಳು-
ಮೊಲೆಕಟ್ಟುಡುಪೂ ಹಿನ್ನಿರಿ ಕುಚ್ಚೂ
ಜರಿ ವಸ್ತ್ರ ತೊಟ್ಟು-
ಮಿನುಗಿತು ಕುಂಕುಮದಾ ಬೊಟ್ಟು.

ಚೆಣಿಕಣಿ ಬಳೆಗಳು ಝಲ್‌ಜಲ್ ನೂಪುರ
ರತ್ನದ ಒಂಟಿಸರ
ತೂಗುವ ಜುಂಕಿಗಳೋಲೆಯನಾಡಿಸಿ
ಕುಲುಕುವರಾ ತಲೆಯ-
ಎದೆ ಮೇಲಿರಿಸುವರಾ ಜಡೆಯ!

ಆಚಿಂದೀಚೆಗೆ ಸರಸದಲಾಡುತ
ಘಮಘಮ ಹೂಗಳನು-
ಕೋಲಿಂ ಬೀಳಿಸಿ ‘ತೇರೆ ಶಿವಾ’ಡುತ-
ಪೋಣಿಸಿದರು ಮಾಲೆ-
ಸಂಪಿಗೆ ಜಾಜಿಗಳೂಮಾಲೆ!

ಕೆಂಪದೊ ಬಾನೂ ಮುಗಿಲೋಳಿಗಳೂ
ವರಿಸುವೆನವನೆನುತ-
ತಂತಮ್ಮ ಕೊರಳೊಳು ಹಾಕುತಮಾಲೆಯ
ಕೈಪರೆಯಾಟದಲಿ-
ನಾಚುವರವರೇ ಗೇಲಿಯಲಿ.

ಸೂರ್ಯನ ಕಾಂತಿಯು ನೀಲಾಕಾಶದಿಂ-
ದೆಲ್ಲಿಯೊ ಹರಿದೋಯ್ತು!
ನಿರ್ಜನ ಭೂಮಿಯದಾಯಿತು-ಸರಿದರು
ಉಳೀಸುತ ಕತ್ತಲನು
ಅನುಭವಿಸುತಲೀ ಹರುಷವನು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...