Home / ಕವನ / ಕವಿತೆ / ಸ್ವಗತ : ಟೈಗರ್ ಎಂಬ (ಹುಚ್ಚು) ನಾಯಿ

ಸ್ವಗತ : ಟೈಗರ್ ಎಂಬ (ಹುಚ್ಚು) ನಾಯಿ

ಗುರ್….. ಟೈಗರ್
ಎಂಬ ಹೆಸರಿನಲೆ ಒಂದು ಕಾವ್ಯವಿದೆ.
ಆದ್ದರಿಂದ
ಎಲ್ಲರಿಗೂ ಕೊಡುತೇನೆ ಒಂದೊಂದು ಮುತ್ತು.
ಇವರಿಗೆಲ್ಲ ಏರಿದೆ ಏನೋ ಮತ್ತು
ಬೊಗಳಬೇಕು ಒಂದು ಭಾಷಣ
ಪರ್ವತದಿಂದ ಕ್ರೈಸ್ತನ ಹಾಗೆ
ನಾನು ಟೈಗರ್ ಎಂಬ ರಾಜನಾಯಿ
ಎಲ್ಲರೂ ಆಗಿ ನನ್ನ ಅನುಯಾಯಿ
ಈ ಕ್ಷಣ
ಭಾಕ್ಷಣ
ಅರೆ! ಎಂತಹ ನಾಜೂಕು ಪ್ರಾಸ!
ಟೈಗರ್ ವೇದವ್ಯಾಸ
ಹರಿಸುತ್ತೇನೆ ಕಾವ್ಯ
ಛೇ ಇದೇಕೆ ಹೀಗೆ ಜೊಲ್ಲು?
ಕಾವ್ಯಕ್ಕಿಷ್ಟು ಬೆಂಕಿ
ಈಗ ಬೇಕಾದ್ದು ಓಟ
ಒಲಂಪಿಕ್ ರೇಸು
ಇದು ರೇಸಿನ ಯುಗ
ಎಲ್ಲ ಸೂಪರ್ ಸಾನಿಕ್
ನಿಂತಲ್ಲಿ ನಿಲ್ಲದೆ ಓಟ
ಹಾಯಾಗಿ ಕಾಲೆತ್ತಿ ಮೂತ್ರ
ಮಾಡುವುದಕ್ಕೂ ಇಲ್ಲ ಪುರುಸತ್ತು
ಇದು ಆಧುನಿಕ ಜಗತ್ತು
ಅರೆ! ಇದೇನು
ಓಡುವಾಗಲೂ ಏಳುವುದಿಲ್ಲ ಲಾಂಗೂಲ?
ಪ್ರಕೃತಿಗೆ ಬಂದಿದೆ ಟೈಫಾಯ್ಡ್ ಜ್ವರ

ಇಲ್ಲದಿದ್ದರೆ ಏಕೆ ಈ ಅವ್ಯವಸ್ಥೆ, ಅಶಿಸ್ತು?
ರುಮ್ಮನೆ ತಿರುಗುತಿದೆ ಪ್ರಪಂಚೆ
ಭಟ್ಟರ ಬ್ರಹ್ಮಾಂಡ ಪಂಚೆ
ಹೀಗಿರಲಿಲ್ಲ ಮುಂಚೆ
ಓಡುವಾಗೆಲ್ಲ ಏಳುತಿತ್ತು ಬಾಲ
ಬೇಕೆಂದಾಗ ಕೂಡ
ಈ ಟೈಗರಿನ ಬಾಲ
ಹರಿಯುತಿದೆ ಜೊಲ್ಲು
ಎಸೆಯುತಿದಾರೆ ಕಲ್ಲು
ಹರಿವಾಗಿದೆ ಹಲ್ಲು
ಆ ಮೇಲೆ ? ಆಮೇಲೆ?
ಥತ್ ಹಾಳಾಯಿತು ಪ್ರಾಸ.
ಡೆನ್ಮಾರ್ಕ್ ಎಂಬ ಕುಂಬಳಕಾಯಿ
ಕೊಳೆತು ನಾರುತ್ತಿದೆ
ನೊಣ ನೊಣ ನೊಣ
ಯಾಕೆ ಬರುತಾವೆ ಹೀಗೆ?
ನಾನೇನು ಹೆಣವೋ?
ಸಾತ್ವ್ರವೇ ಹೇಳಬೇಕಷ್ಟೆ.
ಛೇ! ನಾನಾರ ಲಾಂಗೂಲವೂ ಆಗಲೊಲ್ಲೆ
ನಾ ಹುಟ್ಟಿದಾಗ ಆತನೂ ಹುಟ್ಟಿದ
ನಾನು ಸತ್ತಾಗ ಆತನೂ ಸತ್ತ
ನಾತ ನಾತ
ಆತನ ಮುಖಕ್ಕೂ ಬರುತ್ತಾ ಇವೆ ನೊಣ

ಈ ಜಗತ್ತಿಗೆ ನಾನು ಕೊಟ್ಟಿದ್ದೆ ಅರ್ಥ
ಅನ್ನುತ್ತೇನೆ ನಾನು
ಇದೆಲ್ಲ ವ್ಯರ್ಥ
ಆದರೂ ಈ ಜಗತ್ತಿನ
ಹುಚ್ಚಿನಲು ಒಂದು ಕ್ರಮ ಉಂಟು
A method there is
ನಾನು ಹ್ಯಾಮ್ಲೆಟ್ಟು
ಕೆಂಪಗೆ ಕಾದ ಕಾವಲಿಯಲ್ಲಿ ಯಾರೋ ಎರೆದು
ಮರೆತೇ ಹೋದ
ಆಮ್ಲೆಟ್ಟು ನಾನು ಹ್ಯಾಮ್ಲೆಟ್ಟು ನಾನು ಆಮ್ಲೆಟ್ಟು
ನಾನು ಹ್ಯಾಮ್ಲೆಟ್ಟು…..
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...