Home / ಕವನ / ಕವಿತೆ / ಹೊರತು

ಹೊರತು

ಈ ಸೆಲ್ಲಿನೊಳಗಿಂದ ನೋಟವೇ ಬೇರೆ-ಮೇಲಕ್ಕೆ ತೆರೆದ
ಅವಕಾಶದಲ್ಲಿ ಕತ್ತಲಾಗಿರಬಹುದು ಬೆಳಕಾಗಿರಬಹುದು
ಮೋಡ ಹಾಯುತ್ತಿರಬಹುದು ನಕ್ಷತ್ರಗಳ ಬೆಳಕು
ಬೀಳುತ್ತಿರಬಹುದು ಮುಖಗಳು ಮೂಡುತ್ತಿರಬಹುದು
ನೆನಪು ಹಣಿಕುತ್ತಿರಬಹುದು

ರಾತ್ರಿಯ ತಣ್ಣನೆ ಗಾಳಿ ಮಣ್ಣಿನ ವಾಸನೆ ಉಪ್ಪಿನ
ವಾಸನೆ ತರುವ ಕಿನಾರೆ ಗಾಳಿ ನಿದ್ದೆ ಜೊಂಪಿನ ಬೇಸಗೆಯ
ರಾತ್ರಿ ಗಾಳಿ ಗಾರೆ ಗೋಡೆಯ ಮೇಲೆ ವ್ಯರ್ಥ ಬಡಿದು
ಬೆಳಗಾದಾಗ ಇಲ್ಲಿಗೆ ಬಂದು ತಲುಪುತ್ತಿರುವ ಧ್ವನಿಗಳೇ ಬೇರೆ
ಅವುಗಳ ರೀತಿಯೇ ಬೇರೆ ಆ ಅಲೆಗಳೇ ಬೇರೆ
ರೇಲ್ವೆಯ ಹರಿತ ಧ್ವನಿ ಟ್ರಕ್ಕಿನ ಖಂಡಿ ಧ್ವನಿ
ಯಾವ ಜಗತ್ತಿಗೋ ಹೋಗುತ್ತಿರುವ ಜನರ ಸ್ಟೀಮರಿನ
ಸೈರರಿನ ಧ್ವನಿ ಸ್ವಂತಕ್ಕೆ ಸಂಬಂಧವಿಲ್ಲದೇ
ಮೂಕ ಧ್ವನಿಯಲ್ಲಿ ಸೇರಿ ನಿಶ್ಶಬ್ದವಾಗಿ
ಬಂದು ಬಡಿಯುವ ಶೈಲಿಯೇ ಬೇರೆ
ಈ ಗೋಡೆಗಳ ಒಳಗೆ
ಆ ಜಗತ್ತೇ ಬೇರೆ-ಎಂದಿಗೂ ಸಂಬಂಧವಿರದ
ಮಣ್ಣ ಬೊಂಬೆಗಳ ಸಾಲು ನಿರ್ವಿಕಾರ
ಆಕಾರಗಳ ಸಾಲು ಈ ಗೋಡೆಗಳ ಬದಿಗೆ
ನೆರಳಿದಲ್ಲದ ಜನಗಳ ನಿಟ್ಟುಸಿರು ತಾಗಿ ನಿಂತ ಈ ಕಲ್ಲುಗಳ
ಗೋಡೆ ಮೈಗಳ ಬೆವರು ಜಿಗುಟುಗಟ್ಟಿದ ಗೋಡೆ
ಬಿದ್ದರೂ ಎದ್ದು ನಿಲ್ಲುವ ಈ ಸ್ವಂತ ಮೈ
ಗೋಡೆ ಕಟ್ಟಿ ಮಾಡಿದ ಸಮಾಧಿ
ಸಮಾಧಿಯಲ್ಲಿ ಸತ್ತ ಸಂವೇದನೆ ಮತ್ತು
ಇದಕ್ಕೆಲ್ಲ ಹೊರತಾದ ನಿರ್ವಾತ ಕೋಶ
ಅದೃಶ್ಯಗಳೊಡನೆ ಮಾತಾಡಿ ಅರ್ಥಗಳ ಹಿಂದೆ ಅಲೆದಾಡಿ
ಗೇಣು ನೆಲದಲ್ಲಿ ಸುತ್ತಾಡಿ ದೂಳಿನ ರುಚಿ
ಅನ್ನದ ರುಚಿ ಕಾಮದ ರುಚಿ ವ್ಯತ್ಯಾಸವಿಲ್ಲದ ಅಸ್ತಿತ್ವವಿಲ್ಲದ
ನೆನಪಿನ ಪರೆಯಂತೆ ಅನುಭವ ಮತ್ತು ಸ್ವಂತದ ನಡುವೆ
ಮೈ ಮತ್ತು ಮಾತಿನ ನಡುವೆ ಮೂರ್ಛೆ ಮತ್ತು ಪ್ರಜ್ಞೆಯ ನಡುವೆ
ಮೊದಲಾಗುವುದಕ್ಕೆ ಮತ್ತು ಕೊನೆಗೊಳ್ಳುವುದಕ್ಕೆ
ಕಾಯುವ ಈ ಅವಸ್ಥೆಯೇ ಬೇರೆ
ಇರುವಿಕೆ ಇಲ್ಲದಿರುವಿಕೆಯ ಹೊರಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...