Home / ಕವನ / ಕವಿತೆ / ಹೊರತು

ಹೊರತು

ಈ ಸೆಲ್ಲಿನೊಳಗಿಂದ ನೋಟವೇ ಬೇರೆ-ಮೇಲಕ್ಕೆ ತೆರೆದ
ಅವಕಾಶದಲ್ಲಿ ಕತ್ತಲಾಗಿರಬಹುದು ಬೆಳಕಾಗಿರಬಹುದು
ಮೋಡ ಹಾಯುತ್ತಿರಬಹುದು ನಕ್ಷತ್ರಗಳ ಬೆಳಕು
ಬೀಳುತ್ತಿರಬಹುದು ಮುಖಗಳು ಮೂಡುತ್ತಿರಬಹುದು
ನೆನಪು ಹಣಿಕುತ್ತಿರಬಹುದು

ರಾತ್ರಿಯ ತಣ್ಣನೆ ಗಾಳಿ ಮಣ್ಣಿನ ವಾಸನೆ ಉಪ್ಪಿನ
ವಾಸನೆ ತರುವ ಕಿನಾರೆ ಗಾಳಿ ನಿದ್ದೆ ಜೊಂಪಿನ ಬೇಸಗೆಯ
ರಾತ್ರಿ ಗಾಳಿ ಗಾರೆ ಗೋಡೆಯ ಮೇಲೆ ವ್ಯರ್ಥ ಬಡಿದು
ಬೆಳಗಾದಾಗ ಇಲ್ಲಿಗೆ ಬಂದು ತಲುಪುತ್ತಿರುವ ಧ್ವನಿಗಳೇ ಬೇರೆ
ಅವುಗಳ ರೀತಿಯೇ ಬೇರೆ ಆ ಅಲೆಗಳೇ ಬೇರೆ
ರೇಲ್ವೆಯ ಹರಿತ ಧ್ವನಿ ಟ್ರಕ್ಕಿನ ಖಂಡಿ ಧ್ವನಿ
ಯಾವ ಜಗತ್ತಿಗೋ ಹೋಗುತ್ತಿರುವ ಜನರ ಸ್ಟೀಮರಿನ
ಸೈರರಿನ ಧ್ವನಿ ಸ್ವಂತಕ್ಕೆ ಸಂಬಂಧವಿಲ್ಲದೇ
ಮೂಕ ಧ್ವನಿಯಲ್ಲಿ ಸೇರಿ ನಿಶ್ಶಬ್ದವಾಗಿ
ಬಂದು ಬಡಿಯುವ ಶೈಲಿಯೇ ಬೇರೆ
ಈ ಗೋಡೆಗಳ ಒಳಗೆ
ಆ ಜಗತ್ತೇ ಬೇರೆ-ಎಂದಿಗೂ ಸಂಬಂಧವಿರದ
ಮಣ್ಣ ಬೊಂಬೆಗಳ ಸಾಲು ನಿರ್ವಿಕಾರ
ಆಕಾರಗಳ ಸಾಲು ಈ ಗೋಡೆಗಳ ಬದಿಗೆ
ನೆರಳಿದಲ್ಲದ ಜನಗಳ ನಿಟ್ಟುಸಿರು ತಾಗಿ ನಿಂತ ಈ ಕಲ್ಲುಗಳ
ಗೋಡೆ ಮೈಗಳ ಬೆವರು ಜಿಗುಟುಗಟ್ಟಿದ ಗೋಡೆ
ಬಿದ್ದರೂ ಎದ್ದು ನಿಲ್ಲುವ ಈ ಸ್ವಂತ ಮೈ
ಗೋಡೆ ಕಟ್ಟಿ ಮಾಡಿದ ಸಮಾಧಿ
ಸಮಾಧಿಯಲ್ಲಿ ಸತ್ತ ಸಂವೇದನೆ ಮತ್ತು
ಇದಕ್ಕೆಲ್ಲ ಹೊರತಾದ ನಿರ್ವಾತ ಕೋಶ
ಅದೃಶ್ಯಗಳೊಡನೆ ಮಾತಾಡಿ ಅರ್ಥಗಳ ಹಿಂದೆ ಅಲೆದಾಡಿ
ಗೇಣು ನೆಲದಲ್ಲಿ ಸುತ್ತಾಡಿ ದೂಳಿನ ರುಚಿ
ಅನ್ನದ ರುಚಿ ಕಾಮದ ರುಚಿ ವ್ಯತ್ಯಾಸವಿಲ್ಲದ ಅಸ್ತಿತ್ವವಿಲ್ಲದ
ನೆನಪಿನ ಪರೆಯಂತೆ ಅನುಭವ ಮತ್ತು ಸ್ವಂತದ ನಡುವೆ
ಮೈ ಮತ್ತು ಮಾತಿನ ನಡುವೆ ಮೂರ್ಛೆ ಮತ್ತು ಪ್ರಜ್ಞೆಯ ನಡುವೆ
ಮೊದಲಾಗುವುದಕ್ಕೆ ಮತ್ತು ಕೊನೆಗೊಳ್ಳುವುದಕ್ಕೆ
ಕಾಯುವ ಈ ಅವಸ್ಥೆಯೇ ಬೇರೆ
ಇರುವಿಕೆ ಇಲ್ಲದಿರುವಿಕೆಯ ಹೊರಗೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...